ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

Public TV
1 Min Read

ಚಿತ್ರದುರ್ಗ: ಮದುವೆಗೆ ಗೆಳೆಯನನ್ನು ಕರೆತರಲು ಹೋದಾಗ ಕಾರು ಪಲ್ಟಿಯಾಗಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಬಳಿ ನಡೆದಿದೆ.

ಮಸ್ಕಲ್ ಗ್ರಾಮದ ನಿವಾಸಿ ವೀರೇಶ್(35) ಮೃತ ದುರ್ದೈವಿ. ಅಪಘಾತದಲ್ಲಿ ಕಾರು ಚಾಲಕ ರಘು ಗುರುಪ್ರಸಾದ್ ಹಾಗೂ ಮುದ್ದಣ್ಣಗೆ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮೂವರು ಚಿಲ್ಲಹಳ್ಳಿ ಗ್ರಾಮದಲ್ಲಿ ಅವರ ಸಂಬಂಧಿಕರ ಮದುವೆಗೆಂದು ಬಂದಿದ್ದರು. ಮೊದಲು ಇವರು ಬಂದು ನಂತರ ಬೆಂಗಳೂರಿನಿಂದ ಬಂದ ಗೆಳೆಯನನ್ನು ಕರೆತರಲು ರಾತ್ರಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ಅತೀ ವೇಗದಲ್ಲಿ ಕಾರನ್ನು ಓಡಿಸಿಕೊಂಡು ಬಂದಿದ್ದು, ಕತ್ತಲೆಯಲ್ಲಿ ಕಾರು ಪಲ್ಟಿಯಾಗಿದೆ. ಪರಿಣಾಮ ವೀರೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗರುಪ್ರಸಾದ್ ಮತ್ತು ಮುದ್ದಣಗೆ ತೀವ್ರವಾಗಿ ಗಾಯಗಳಾಗಿವೆ.

ಸ್ಥಳಕ್ಕೆ ಅಬ್ಬಿನಹೊಳೆ ಠಾಣೆಯ ಪೊಲೀಸರು ಬಂದು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಸದ್ಯಕ್ಕೆ ಚಾಲಕ ಗುರುಪ್ರಸಾದ್ ಅವರನ್ನು ಬೆಂಗಳೂರಿನ ನಿಮಾನ್ಸ್ ಗೆ ರವಾನಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *