ವಿಎಚ್‍ಪಿ, ಬಜರಂಗದಳ, ದುರ್ಗಾವಾಹಿನಿಗಳಿಂದ ಮಂಗ್ಳೂರಲ್ಲಿ ಲವ್ ಜಿಹಾದ್ ಬಗ್ಗೆ ಜಾಗೃತಿ

Public TV
1 Min Read

ಮಂಗಳೂರು: ಲವ್ ಜಿಹಾದ್ ವಿರುದ್ದ ಜಾಗೃತಿ ಅಭಿಯಾನ ನಡೆಸಲು ವಿಎಚ್‍ಪಿ, ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ನಿರ್ಧರಿಸಿವೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಹತ್ತಾರು ಯುವತಿಯರು ಮನೆಯಿಂದ ನಾಪತ್ತೆಯಾಗಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಈ ಹಿನ್ನಲೆಯಲ್ಲಿ ಮನೆ ಮನೆಗೆ ತೆರಳಿ ಹಿಂದೂ ಯುವತಿಯರಿಗೆ ಲವ್ ಜಿಹಾದ್‍ನಿಂದಾಗುವ ತೊಂದರೆಗಳ ಬಗ್ಗೆ ತಿಳಿವಳಿಕೆ ಮೂಡಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಇದನ್ನೂ ಓದಿ: ಮತ್ತೆ ನೈತಿಕ ಪೊಲೀಸ್‍ಗಿರಿ-ಮಂಗ್ಳೂರಲ್ಲಿ ಯುವಕ, ಯುವತಿಯರ ಮೇಲೆ ಹಲ್ಲೆ

ಜಾಗೃತಿಗಾಗಿ ಹಲವಾರು ತಂಡಗಳು ಸಿದ್ಧವಾಗಿದ್ದು ಕರಪತ್ರ ಹಂಚುವ ಮೂಲಕ, ಕಾಲೇಜು ವಿದ್ಯಾರ್ಥಿಗಳಿಗೆ ಲವ್ ಜಿಹಾದ್‍ನ ದುಷ್ಪರಿಣಾಮಗಳನ್ನು ಮನವರಿಕೆ ಮಾಡಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕರಾವಳಿಯಲ್ಲಿ ಮತ್ತೆ ಪೊಲೀಸ್ ನೈತಿಕಗಿರಿ – ತಮಿಳು ನಟಿಗೆ ಪೊಲೀಸ್, ಹಿಂದು ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

 ಇದನ್ನೂ ಓದಿ: ಮೆಹಂದಿ ಶಾಸ್ತ್ರದಂದೇ ರಾತ್ರಿ ನಾಪತ್ತೆಯಾಗಿದ್ದ ಯುವತಿ ಈಗ ಜೈಲು ಪಾಲು!

Share This Article
Leave a Comment

Leave a Reply

Your email address will not be published. Required fields are marked *