ಮಗುವನ್ನು ಶಾಲೆಯಿಂದ ಕರೆತರಲು ಹೋಗುವಾಗ ತಾಯಿಗೆ ಡಿಕ್ಕಿ ಹೊಡೆದ ಕಾರು- ಮಹಿಳೆ ಸ್ಥಳದಲ್ಲೇ ಸಾವು

Public TV
1 Min Read

ಬೆಂಗಳೂರು: ಶಾಲೆಗೆ ತೆರಳಿದ್ದ ತನ್ನ ಮಗುವನ್ನು ವಾಪಸ್ ಮನೆಗೆ ಕರೆತರಲು ತೆರಳುತ್ತಿದ್ದ ತಾಯಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆ ಸಂಭವಿಸಿದೆ.

ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದ ಬಳಿ ನಡೆದಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಅಪಘಾತವಾದ ಬಳಿಕ, ದಾಸನಪುರ ನಿವಾಸಿ ಸುದಾ ಎಂಬ ಮಹಿಳೆಗೆ ಅಪ್ಪಳಿಸಿದೆ.

ಈ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲಿ ಸಾವನಪ್ಪಿದ್ದರೆ, ಎರಡು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೆ ಈ ಘಟನಾ ಸ್ಥಳದಲ್ಲಿ ಸ್ಕೈವಾಕ್ ಇಲ್ಲದೇ ಇರುವ ಕಾರಣ ಮಹಿಳೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *