ಬೆಳ್ಳಂದೂರು ಕೆರೆಯಲ್ಲಿ ಆರದ ಬೆಂಕಿ: ಏನ್ ಮಾಡ್ತಿದೆ ಬೆಂಗ್ಳೂರು ಆಡಳಿತ?

Public TV
1 Min Read

ಬೆಂಗಳೂರು: ಬೆಳ್ಳಂದೂರು ಕೆರೆಯ ಇಬ್ಬಲೂರು ಮತ್ತು ಈಜಿಪುರ ಕಡೆಯ ದಡದಲ್ಲಿನ ಹುಲ್ಲಿಗೆ ಶುಕ್ರವಾರ ಹತ್ತಿದ ಬೆಂಕಿ ನಂದಿಸುವ ಕಾರ್ಯ ಶನಿವಾರವೂ ಮುಂದುವರಿದಿದೆ.

21 ಗಂಟೆಗಳ ಕಾರ್ಯಾಚರಣೆಯ ಬಳಿಕವೂ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡಿರುವ ಬೆಂಕಿ ತಣ್ಣಾಗಾಗಿಲ್ಲ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡಿರುವ ಅಗ್ನಿ ಜ್ವಾಲೆಯನ್ನು ಆರಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಜೊತೆಗೆ 5 ಸಾವಿರ ಸೈನಿಕರು ಕೂಡಾ ಕೈಜೋಡಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಈ ಹಿಂದಿನ ವಿಚಾರಣೆ ವೇಳೆ ಬೆಳ್ಳಂದೂರು ಕೆರೆಯನ್ನು ಸಂಪೂರ್ಣ ಸ್ವಚ್ಛ ಮಾಡಬೇಕು ಎಂದು ಅನೇಕ ಬಾರಿ ತಾಕೀತು ಮಾಡಿತ್ತು. ಆದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ), ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಎಲ್‍ಸಿಡಿಎ), ಬಿಡಿಎ ಹಾಗೂ ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಮತ್ತೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಹಿಂದೆ 2015ರಲ್ಲಿ ಕೆರೆಯಲ್ಲಿ ವಿಷಪೂರಿತ ನೊರೆಯಿಂದಾಗಿ ಬೆಂಕಿ ಹೊತ್ತಿಕೊಂಡಿತು. ಇದಾದ ಬಳಿಕ 2016ರ ಫೆಬ್ರುವರಿಯಲ್ಲಿ ನೊರೆ ಸಮಸ್ಯೆಯಿಂದ ಕೆರೆಗೆ ಬೆಂಕಿ ಹತ್ತಿಕೊಂಡಿತ್ತು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ಈ ಪ್ರಕರಣ ಎನ್‍ಜಿಟಿಯನ್ನು ತಲುಪಿತ್ತು. ಅರ್ಜಿ ವಿಚಾರಣೆ ವೇಳೆ ನ್ಯಾಯಮಂಡಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಪರಿಣಾಮ ಕೆರೆಯ ಹೂಳನ್ನು ತೆಗೆಯಲಾಗಿತ್ತು. ಈಗ ಕೆರೆಯ ಸುತ್ತಲೂ ಬೆಲಿ ಹಾಕಲಾಗಿದೆ.

https://youtu.be/F_VbVFNu6F0

https://youtu.be/syYAEeLN9wc

https://youtu.be/j98T-w6QJ98

Share This Article
Leave a Comment

Leave a Reply

Your email address will not be published. Required fields are marked *