ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

Public TV
0 Min Read

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಕಂಬಾರ ಅವರು ಆಯ್ಕೆಯಾದರು.

ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತ ಗಳಿಸಿದರೆ, ಒರಿಯಾ ಸಾಹಿತಿ ಪ್ರತಿಭಾ ರಾಯ್ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಬಿದ್ದವು.

ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.

Share This Article
Leave a Comment

Leave a Reply

Your email address will not be published. Required fields are marked *