ಸೆಟ್ಟೇರುವ ಮೊದಲೇ ದರ್ಶನ್ ‘ಒಡೆಯರ್’ ಚಿತ್ರಕ್ಕೆ ವಿರೋಧ!

Public TV
1 Min Read

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ `ಒಡೆಯರ್’ಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳದಿಂದ ‘ಒಡೆಯರ್’ ಟೈಟಲ್‍ಗೆ ವಿರೋಧ ವ್ಯಕ್ತವಾಗಿದ್ದು ಈ ಶೀರ್ಷಿಕೆಯನ್ನ ಹಿಂಪಡೆಯುವಂತೆ ಆಗ್ರಹಿಸಿದೆ. ಈ ಕುರಿತು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಸಂಘಟನೆ ಒಂದು ವೇಳೆ ಟೈಟಲ್ ಹಿಂಪಡೆಯದಿದ್ದಲ್ಲಿ ಬೆಂಗಳೂರಿನಲ್ಲಿ ದರ್ಶನ್ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿದೆ.

ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ ಎಂಬುದು ಸಂಘಟನೆಯ ವಿರೋಧಕ್ಕೆ ಕಾರಣವಾಗಿದೆ.

ಸದ್ಯ ದರ್ಶನ್ `ಯಜಮಾನ’ ಚಿತ್ರದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂದಿನ ಚಿತ್ರ ಒಡೆಯರ್ ಶೀರ್ಷಿಕೆ ಬಹಿರಂಗವಾಗಿತ್ತು, ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಒಡೆಯರ್ ಚಿತ್ರವನ್ನ ಎಂ.ಡಿ ಶ್ರೀಧರ್ ನಿರ್ದೇಶಿಸಲಿದ್ದಾರೆ.

ಈ ಚಿತ್ರ ಸೆಟ್ಟರಲು ಇನ್ನೂ ಕೆಲ ತಿಂಗಳಿದೆ. ಆದರೆ ಆರಂಭದಲ್ಲೇ ಶೀರ್ಷಿಕೆಗೆ ಕಂಟಕ ಎದುರಾಗಿದೆ. ಇದನ್ನೂ ಓದಿ: ಸಿನಿಮಾ ಸೆಟ್ ನ ಮೊದಲ ದಿನವೇ ಯಜಮಾನನಾಗಿ ಬಂದ ಚಾಲೆಂಜಿಂಗ್ ಸ್ಟಾರ್!

Share This Article
Leave a Comment

Leave a Reply

Your email address will not be published. Required fields are marked *