ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಚುನಾವಣಾ ಚಾಣಕ್ಯ

Public TV
2 Min Read

– ಈ ಬಾರಿ ಅಮಿತ್ ಶಾ ಟೂರ್ ಎಲ್ಲೆಲ್ಲಿ..?

ಬೆಂಗಳೂರು: ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 30, 31 ರಂದು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.

ಪ್ರಮುಖವಾಗಿ ಸುತ್ತೂರು ಮಠ, ಗಣಪತಿ ಸಚ್ಚಿದಾನಂದ ಆಶ್ರಮ, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ, ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳಲಿದ್ದು, ಪಕ್ಷ ಸಂಘಟನೆಯ ಸಮಾವೇಶಗಳಲ್ಲೂ ಭಾಗವಹಿಸಲಿದ್ದಾರೆ. ಅಲ್ಲದೆ ಪ್ರಮುಖವಾಗಿ ಮೈಸೂರು ಅರಮನೆಗೆ ಭೇಟಿ ನೀಡಲಿದ್ದು, ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್ ಅವರನ್ನ ಭೇಟಿ ಮಾಡಲಿದ್ದಾರೆ ಅಂತಾ ಹೇಳಲಾಗುತ್ತಿದೆ.

ಎಲ್ಲೆಲ್ಲಿ ಹೋಗ್ತಾರೆ ಅಮಿತ್ ಶಾ, ಇಲ್ಲಿದೆ ವೇಳಾಪಟ್ಟಿ:

* ಇಂದು ರಾತ್ರಿ ಮೈಸೂರಿಗೆ ಆಗಮಿಸಿ ವಾಸ್ತವ್ಯ.
* 30ರಂದು ಬೆಳಗ್ಗೆ 9 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ
* 10.30ಕ್ಕೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥರ ಭೇಟಿ
* ಕ್ಯಾತಮಾರನಹಳ್ಳಿಯಲ್ಲಿ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ರಾಜು ನಿವಾಸಕ್ಕೆ ಭೇಟಿ
* ಮೈಸೂರಿನಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ನವಶಕ್ತಿ ಸಮಾವೇಶದಲ್ಲಿ ಭಾಗಿ
* ಮಧ್ಯಾಹ್ನ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ದಲಿತ ಮುಖಂಡರ ಜೊತೆ ಸಂವಾದ ಮತ್ತು ಭೋಜನ
* ಸಂಜೆ ಕೊಳ್ಳೇಗಾಲದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ನವಶಕ್ತಿ ಸಮಾವೇಶದಲ್ಲಿ ಭಾಗಿ
* ಸಂಜೆ ಚಾಮರಾಜನಗರದಲ್ಲಿ ಎಸ್ ಟಿ ಸಮಾವೇಶ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗಿ
* ರಾತ್ರಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ
* ಮಾರ್ಚ್ 31ರಂದು ಬೆಳಗ್ಗೆ ಮಂಡ್ಯ ಪ್ರವಾಸ
* ಶ್ರೀರಂಗಪಟ್ಟಣದ ಚಿನ್ನೇನಹಳ್ಳಿಯಲ್ಲಿ ಆತ್ಮಹತ್ಯೆಗೆ ಶರಣಾದ ರೈತ ರಾಜೇಂದ್ರಪ್ಪ ನಿವಾಸಕ್ಕೆ ಭೇಟಿ
* ಬೆಳಗ್ಗೆ ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ
* ಮಧ್ಯಾಹ್ನ ಮಂಡ್ಯದಲ್ಲಿ ಸಾವಯವ ಕೃಷಿಕರು ಹಾಗು ಮಹಿಳೆಯರೊಂದಿಗೆ ಸಂವಾದ ಮತ್ತು ರೈತರೊಂದಿಗೆ ಭೋಜನ
* ಮಧ್ಯಾಹ್ನ ಮಂಡ್ಯದಲ್ಲಿ 5 ಜಿಲ್ಲೆಗಳ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ
* ಸಂಜೆ ಚನ್ನಪಟ್ಟಣದ ಗೊಂಬೆ ಕಾರ್ಖಾನೆಗೆ ಭೇಟಿ
* ಸಂಜೆ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ದಿಮೆದಾರರ ಜೊತೆ ಸಂವಾದ
* ರಾತ್ರಿ ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ
* 31ರಂದು ರಾತ್ರಿ ಮೈಸೂರಿನಿಂದ ದೆಹಲಿಗೆ ವಾಪಸ್

Share This Article
Leave a Comment

Leave a Reply

Your email address will not be published. Required fields are marked *