ಅನಂತಕುಮಾರ್ ಹೆಗ್ಡೆ ಬೆಂಗಾವಲು ವಾಹನಕ್ಕೆ ಲಾರಿ ಗುದ್ದಿದ ಪ್ರಕರಣ: ಟ್ವಿಟ್ಟರ್ ನಲ್ಲಿ ಬಿಜೆಪಿಗೆ ತಿರುಗೇಟು ಕೊಟ್ಟ ಸಿಎಂ

Public TV
1 Min Read

ಬೆಂಗಳೂರು: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಬೆಂಗಾವಲು ವಾಹನಕ್ಕೆ ಲಾರಿ ಗುದ್ದಿದ ಪ್ರಕರಣ ಸಂಬಂಧ ಬುಧವಾರ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಟ್ವಿಟ್ಟರ್ ವಾರ್ ನಡೆದಿದೆ. ಇದನ್ನೂ ಓದಿ:ಕೇಂದ್ರ ಸಚಿವರ ಕಾರ್ ಅಪಘಾತಕ್ಕೆ ಹಾವೇರಿ ಎಸ್‍ಪಿ ಸ್ಪಷ್ಟನೆ

ಲಾರಿ ಕೊಪ್ಪ ಬಿಜೆಪಿ ಘಟಕದ ಅಧ್ಯಕ್ಷ ನಾಗೇಶ್ ಅನ್ನೋರಿಗೆ ಸೇರಿದ್ದು ಎಂಬ ಮಾಹಿತಿಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, ಕರ್ನಾಟಕ ಬಿಜೆಪಿಯಲ್ಲಿರುವ ನಾಯಕತ್ವ ಕೊರತೆಯ ಲಾಭ ಪಡೆಯಲು ಹೆಗಡೆ ಹವಣಿಸ್ತಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಸಂಸದ ಪ್ರತಾಪ್ ಸಿಂಹ ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪರನ್ನು ಮೀರಿ ಬೆಳೆಯಲು ಯತ್ನಿಸ್ತಿದ್ದಾರೆ. ಹೀಗಾಗಿ ಸಣ್ಣ ಘಟನೆಯನ್ನು ಬಳಸಿಕೊಂಡು ಹೆಗಡೆ ಯಡಿಯೂರಪ್ಪರನ್ನು ಸೈಡ್‍ಲೈನ್ ಮಾಡಲು ಯತ್ನಿಸ್ತಿದ್ದಾರೆ ಅಂತ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನಾನು ಅನಂತ್‌ಕುಮಾರ್‌ ಹೆಗ್ಡೆ, ಪ್ರತಾಪ್ ಸಿಂಹಗಿಂತಲೂ ಪಕ್ಕಾ ಹಿಂದೂ : ಸಿಎಂ

ನಿಮಗಿದು ಸಣ್ಣ ಘಟನೆನಾ..? ಡಿಕ್ಕಿಯಲ್ಲಿ ಏಳು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಿಮ್ಮ ನಿರ್ಲಕ್ಷ್ಯ ಖಂಡನೀಯ. ಪಾರದರ್ಶಕ ತನಿಖೆ ಬದಲಿಗೆ ರಾಜಕೀಯ ಮಾಡ್ತಿದ್ದೀರಿ. ನಿಮಗೆ ನಾಚಿಕೆ ಆಗ್ಬೇಕು ಅಂತ ಬಿಜೆಪಿ ತಿರುಗೇಟು ನೀಡಿದೆ. ಇದನ್ನೂ ಓದಿ: ಸಚಿವ ಅನಂತ್ ಕುಮಾರ್ ಹೆಗ್ಡೆ ಕಾರ್ ಅಪಘಾತ- ಸಿಎಂಗೆ ಸಂಸದ ಪ್ರತಾಪ್ ಸಿಂಹ ಸವಾಲ್

https://youtu.be/CIkpZUPuKO8

https://youtu.be/cwbDP5ViV3U

Share This Article
Leave a Comment

Leave a Reply

Your email address will not be published. Required fields are marked *