ಬೆಳಗಾವಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ತನಗೆ ಮರಾಠಿ ಮಾತನಾಡಲು ಬರಲ್ಲ ಅದ್ದರಿಂದ ಕ್ಷಮಿಸಿ ಎಂದು ಹೇಳಿದ್ದಾರೆ.
ಬೆಳಗಾವಿಯ ಚಿಕ್ಕೋಡಿ ಹಾಗೂ ನಿಪ್ಪಾಣಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಈ ವೇಳೆ ಕಾರ್ಯಕ್ರಮಕ್ಕೆ 3 ಗಂಟೆ ತಡವಾಗಿ ಬಂದ ಅವರು ವೇದಿಕೆಗೆ ಆಗಮಿಸಿ ಕ್ಷಮೆ ಕೋರಿದರು. ಆದರೆ ಮಹಾರಾಷ್ಟ್ರ ಗಡಿ ಪ್ರದೇಶವಾದ ಕಾರಣ ಅವರು ಮತ್ತೆ ತನಗೆ ಮರಾಠಿ ಭಾಷೆ ಬರಲ್ಲ ಎಂದು ಕ್ಷಮೆ ಕೇಳಿದರು.
ಈ ಹಿಂದೆ ಬಿಜೆಪಿ ಕೇಂದ್ರ ನಾಯಕರ ವಿರುದ್ಧ ಕನ್ನಡ ಭಾಷೆಯ ಅಸ್ತ್ರ ಪ್ರಯೋಗಿಸಿ ತನಗೆ ಹಿಂದಿ ಭಾಷೆ ಬರಲ್ಲ ಎಂದು ಕಾಳೆಲೆದಿದ್ದರು. ಆದರೆ ಇಂದು ನಿಪ್ಪಾಣಿ ಕ್ಷೇತ್ರದಲ್ಲಿ ಮರಾಠಿ ಭಾಷಿಕರ ಮನವೊಲಿಸಲು ಕ್ಷಮೆ ಕೇಳಿದ್ದಾರೆ.
ಬಳಿಕ ಸಮಾವೇಶದಲ್ಲಿ ಮಾತನಾಡಿದ ಅವರು ವಿರೋಧಿ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ, ಜೆಡಿಎಸ್ ಅವರಪ್ಪನ ಆಣೆ ಅಧಿಕಾರಕ್ಕೆ ಬರುವುದಿಲ್ಲ ಎಂದರು. ಇದೇ ವೇಳೆ ತಾವು ಅಧಿಕಾರಕ್ಕೆ ಬಂದರೆ ಕುರಿಗಾಹಿಗಳ ಎಲ್ಲ ಸಾಲ ಮನ್ನಾ ಮಾಡಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.
https://www.youtube.com/watch?v=mOOgdKVxZZg