ಕೇದಾರನಾಥ ಸನ್ನಿಧಿಯಲ್ಲಿ ಬಾಹುಬಲಿ ಚೆಲುವೆ ಅನುಷ್ಕಾ ಶೆಟ್ಟಿ – ಅಭಿಮಾನಿಗಳು ಗರಂ

Public TV
1 Min Read

ಡೆಹ್ರಾಡೂನ್: ಬಾಹುಬಲಿಯ ಚೆಲುವೆ, ಭಾಗಮತಿ ನಟಿ ಅನುಷ್ಕಾ ಶೆಟ್ಟಿ ಅವರು ಉತ್ತರಾಖಂಡದ ಕೇದಾರನಾಥ ಸನ್ನಿಧಿಗೆ ಭೇಟಿ ನೀಡಿ ಶಿವನ ದರ್ಶನ ಪಡೆದಿದ್ದಾರೆ.

ಬಾಹುಬಲಿ ಸಿನಿಮಾದಲ್ಲಿ ದೇವಾಸೇನ ಪಾತ್ರದಲ್ಲಿ ಅದ್ಭುತವಾಗಿ ಅಭಿನಯಿಸಿ ಅಭಿಮಾನಿಗಳ ಮೆಚ್ಚುಗೆ ಪಾತ್ರರಾಗಿರುವ ಅನುಷ್ಕಾ ಶೆಟ್ಟಿ ಕೇದಾರನಾಥ ಶಿವನ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಅನುಷ್ಕಾ ಅವರು ತಾವು ಉಳಿದುಕೊಂಡಿದ್ದ ಸ್ಥಳದಿಂದ ಸುಮಾರು 17 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ದೇವಾಸ್ಥಾನಕ್ಕೆ ಹೋಗಿದ್ದಾರೆ.

ಮುಂಜಾನೆ ಸುಮಾರು 4 ಗಂಟೆಗೆ ನಡೆಯಲು ಆರಂಭಿಸಿದ್ದು, 8 ಗಂಟೆಗೆ ದೇವಾಸ್ಥಾನಕ್ಕೆ ತಲುಪಿದ್ದಾರೆ. ಅಲ್ಲಿ ಶಿವನ ದರ್ಶನ ಪಡೆದಿದ್ದು, ವಿಶೇಷ ಪೂಜೆ ಮಾಡಿಸಿದ್ದಾರೆ.

ಪೂಜೆ ಮುಗಿಸಿ ಹಿಂದಿರುಗುವಾಗ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾರೆ. ಮೊದಮೊದಲು ಅಭಿಮಾನಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ನಂತರ ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಳ್ಳುವುದನ್ನು ನಿರಾಕರಿಸಿ ಹೊರಟು ಹೋಗಿದ್ದಾರೆ. ಇದರಿಂದ ಅಭಿಮಾನಿಗಳು ಅನುಷ್ಕಾ ಮೇಲೆ ಗರಂ ಆಗಿದ್ದಾರೆ.

ಕೇದಾರನಾಥ ಸನ್ನಿಧಿಯಲ್ಲಿ ಭದ್ರತೆ ಸಮಸ್ಯೆ ಇದ್ದುದ್ದರಿಂದ ಅನುಷ್ಕಾ ಸೆಲ್ಫಿಗೆ ನಿಕಾರಿಸಿದ್ದಾರೆ. ನಂತರ ಅವರ ಅಲ್ಲಿಂದ ಅರ್ಧದಾರಿಯವರೆಗೆ ನಡೆದುಕೊಂಡು ಹೋಗಿದ್ದಾರೆ. ಇನ್ನು ಅರ್ಧದಾರಿಯಲ್ಲಿ ಕುದುರೆಯನೇರಿ ಹೋಗಿದ್ದಾರೆ.

ಬಾಹುಬಲಿ ಸಿರೀಸ್ ಚಿತ್ರದ ಬಳಿಕ ಅನುಷ್ಕಾ ಅವರು, ಜಿ. ಅಶೋಕ್ ನಿರ್ದೇಶನದಲ್ಲಿ ಚಿತ್ರ ಮೂಡಿಬಂದಿರುವ ಭಾಗಮತಿ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಒಂದು ಮಹಿಳಾ ಪ್ರಧಾನ ಕಥೆಯ ಚಿತ್ರವಾಗಿದ್ದು, ಥ್ರಿಲ್ಲರ್ ಹಾರರ್ ಹೂರಣವಿದೆ. ವಂಶಿ ಕೃಷ್ಣರೆಡ್ಡಿ ನಿರ್ಮಿಸಿರುವ ಈ ಚಿತ್ರದಲ್ಲಿ ಅನುಷ್ಕಾ ವಿಭಿನ್ನ ಶೇಡ್‍ಗಳಲ್ಲಿ ಕಂಗೊಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *