ಶಾಕ್ ಹೊಡೆದು ಕಂಬದ ಮೇಲೆಯೇ ನರಳಾಡಿದ ಚೆಸ್ಕಾಂ ಮಾಜಿ ನೌಕರ!

Public TV
1 Min Read

ಮೈಸೂರು: ವಿದ್ಯುತ್ ಕಂಬ ಏರಿದ ಚೆಸ್ಕಾಂ ಮಾಜಿ ನೌಕರನಿಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಕಂಬದ ಮೇಲೆಯೇ ನರಳಾಡಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಉಯಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಕುಮಾರ್ ವಿದ್ಯುತ್ ಕಂಬ ಏರಿದ ಮಾಜಿ ಗುತ್ತಿಗೆ ನೌಕರ. ಗ್ರಾಮದಲ್ಲಿ ವಿದ್ಯುತ್ ಇಲ್ಲದ ಕಾರಣ ಪರಿಶೀಲನೆಗೆ ಆಗಮಿಸಿದ್ದ ಚೆಸ್ಕಾಂ ಸಿಬ್ಬಂದಿ ಪುಟ್ಟರಾಜು, ಕಂಬ ಹತ್ತುವ ಬದಲು ಶಿವಕುಮಾರ್‍ನನ್ನು ಹತ್ತಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.

ಶಿವಕುಮಾರ ಗುತ್ತಿಗೆ ಅವಧಿ 3 ತಿಂಗಳ ಹಿಂದೆಯೇ ಮುಗಿದಿತ್ತು. ಶಿವಕುಮಾರ್ ವಿದ್ಯುತ್ ಕಂಬ ಏರಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಇದರಿಂದ ಕಂಬದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಶಿವಕುಮಾರ್ ಕೆಲ ಕಾಲ ನರಳಾಡಿದ್ದಾರೆ.

ತಕ್ಷಣ ಶಿವಕುಮಾರ್ ಸಹಾಯಕ್ಕೆ ಆಗಮಿಸಿದ ಗ್ರಾಮಸ್ಥರು, ಕಂಬದಿಂದ ಇಳಿಸಿ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *