ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ವೃದ್ಧನಿಗೆ ಡಿಕ್ಕಿ ಹೊಡೆದ ಯುವಕರು!

Public TV
0 Min Read

ಮಂಡ್ಯ: ಹೊಸಬೂದನೂರು ಗ್ರಾಮದ ಬಳಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದ ಯುವಕರು ಪಾದಚಾರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಪಾದಚಾರಿ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಗಪ್ಪ(64) ಎಂಬವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಕಾರಿನಲ್ಲಿ ಲಾಂಗ್ ಡ್ರೈವ್‍ಗೆ ಬಂದಿದ್ದ ಯುವಕರು ಅಪಘಾತ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಕಾರಿನ ಗ್ಲಾಸ್ ಒಡೆದು ಯುವಕರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯಲ್ಲಿ ಪೊಲೀಸರ ವಾಹನದ ಗ್ಲಾಸ್ ಕೂಡ ಒಡೆದು ಹೋಗಿದೆ. ಈ ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *