ಮಕ್ಕಳ ಕಳ್ಳ ಎಂದು ಭಾವಿಸಿ ಥಳಿತ- ನಡು ರಸ್ತೆಯಲ್ಲೇ ಯುವಕ ದುರ್ಮರಣ!

Public TV
1 Min Read

ಬೆಂಗಳೂರು: ಮಕ್ಕಳ ಕಳ್ಳ ಅಂತ ಭಾವಿಸಿ ವ್ಯಕ್ತಿಯೋರ್ವನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ, ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿ ನಡುರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮೃತ ಕಾಲುರಾಮ್ ಅಲಿಯಾಸ್ ಬಚ್ಚನ್‍ರಾಮ್ ರಾಜಸ್ಥಾನ ಮೂಲದವನು ಅಂತ ತಿಳಿದುಬಂದಿದೆ.

ಕಾಟನ್ ಪೇಟೆ ಬಳಿಯ ಬಕ್ಷಿಗಾರ್ಡನ್‍ಗೆ ಈತ ಹೋಗಿದ್ದಾನೆ. ಈ ವೇಳೆ ಮಕ್ಕಳ ಕಳ್ಳ ಎಂದು ಶಂಕಿಸಿ ಈತನನ್ನು ಹಿಡಿದ ಸಾರ್ವಜನಿಕರು ಹೊಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪೆಟ್ಟು ತಿಂದ ಕಾಲುರಾಮ್‍ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ರು. ಆದ್ರೆ ಅದಾಗಲೇ ಆತ ಮೃತಪಟ್ಟಿದ್ದಾನೆ.

ಇದಕ್ಕೆಲ್ಲಾ ಕಾರಣ ವಾಟ್ಸಾಪ್‍ಗಳಲ್ಲಿ ಹರಿದಾಡ್ತಿರುವ ಒಂದು ಆಡಿಯೋ ಕ್ಲಿಪ್ ಎನ್ನಲಾಗಿದೆ. ಮಕ್ಕಳ ಕಳ್ಳರ ಬಗ್ಗೆ ಎಚ್ಚರಿಕೆ ನೀಡುವ ಈ ಆಡಿಯೋ ಕ್ಲಿಪ್ ಸುಳ್ಳು ವದಂತಿಯಷ್ಟೇ ಅಂತ ಚಿಕ್ಕಬಳ್ಳಬಳ್ಳಾಪುರ ಎಸ್‍ಪಿ ಸ್ಪಷ್ಟನೆ ಕೂಡಾ ಕೊಟ್ಟಿದ್ರು.

Share This Article
Leave a Comment

Leave a Reply

Your email address will not be published. Required fields are marked *