ಮೆಟ್ರೋ ಕಾಮಗಾರಿ ವೇಳೆ ಬೈಕಿಗೆ ಕ್ರೈನ್ ಡಿಕ್ಕಿ- ಸವಾರ ದುರ್ಮರಣ!

Public TV
1 Min Read

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕ್ರೈನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯಲ್ಲಿ ನಡೆದಿದೆ.

ಸುಶೀಲ್ ಕಾಂಚನ್ (32) ಮೃತ ದುರ್ದೈವಿ. ಉಡುಪಿ ನಿವಾಸಿಯಾಗಿರೋ ಇವರು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ನೆಲೆಸಿದ್ದರು.

ಉಡುಪಿ ಜಿಲ್ಲೆಯ ಮಲ್ಪೆಯಿಂದ ಬೆಂಗಳೂರಿಗೆ ಬಂದಿದ್ದ ಸುಶೀಲ್ ಕಾಂಚನ್, ಝೊಮೇಟೋ ಪುಡ್ ಡೆಲಿವೆರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದರು. ಗುರುವಾರ ಮಧ್ಯರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದು, ಸುಶೀಲ್ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮೆಟ್ರೋ ಸಿಬ್ಬಂದಿ ವಿರುದ್ಧ ಮೃತ ಸುಶೀಲ್ ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *