ಹಾವೇರಿ: ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಲಾಯಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಶ್ರೀರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಆರಿಕಟ್ಟಿ (60) ಮೃತ ರೈತ. ಇಂದು ಬೆಳಗ್ಗೆ ಟ್ರ್ಯಾಕ್ಟರ್ ತೆಗೆದುಕೊಂಡು ಜಮೀನು ಉಳಿಮೆ ಮಾಡಲು ಹೋಗಿದ್ದರು. ಆದರೆ ಉಳುಮೆ ಮಾಡುವ ವೇಳೆ ನಿಯಂತ್ರಣಕ್ಕೆ ಸಿಗದೇ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ಅಡಿಗೆ ಸಿಕ್ಕಿ ರೈತ ನಿಂಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹಂಸಭಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.