ಸಹಪಾಠಿಗಳ ಮೇಲೆ ಹಲ್ಲೆಗೈದು ವಿದ್ಯಾರ್ಥಿಯಿಂದ ಕಿರುಕುಳ- ದೂರು ನೀಡಿದ್ರೆ ಕೊಲ್ಲುವ ಬೆದರಿಕೆ

Public TV
1 Min Read

ಮಂಗಳೂರು: ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳಿಗೆ ಹಲ್ಲೆ ನಡೆಸಿ ಕಿರುಕುಳ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ವಿಡಿಯೋ ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಜಯನಾಥ ಶೆಟ್ಟಿ ಎಂಬಾತ ಹಲ್ಲೆ ನಡೆಸಿದ್ದು, ಈ ಬಗ್ಗೆ ನೊಂದ ವಿದ್ಯಾರ್ಥಿಯೋರ್ವ ಹಲ್ಲೆಯ ದೃಶ್ಯಗಳ ಸಹಿತ ಪತ್ರ ಬರೆದು ಮಾಹಿತಿ ನೀಡಿದ್ದಾನೆ.

ವಿಜಯನಾಥ ಶೆಟ್ಟಿ ಎಂಬಾತ ಕಾಲೇಜಿನ ಇತರ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿದ್ದಾನೆ. ತನ್ನ ಮಾವನ ಜೊತೆಗೆ ಸೇರಿಕೊಂಡು ರೌಡಿಯಂತೆ ವರ್ತಿಸುತ್ತಾನೆ. ಪೊಲೀಸರಿಗೆ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ ಅಂತ ಪತ್ರದಲ್ಲಿ ತಿಳಿಸಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *