ಅಕ್ರಮ ದನದ ಮಾಂಸ ಸಾಗಾಟ ಶಂಕೆ-ಭಜರಂಗದಳ ಕಾರ್ಯಕರ್ತರಿಂದ ಕಲ್ಲು ತೂರಾಟ

Public TV
1 Min Read

ಬೆಳಗಾವಿ: ರಾಜ್ಯದಿಂದ ಗೋವಾಕ್ಕೆ ಅಕ್ರಮಗಾಗಿ ಮಾಂಸ ಸಾಗಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ನಡೆದಿದೆ.

ಗೋವಾಕ್ಕೆ ಅಕ್ರಮವಾಗಿ ಮಾಂಸ ಸಾಗಿಸುತ್ತಿದ್ದ ಎರಡು ಮಹಿಂದ್ರಾ ಪಿಕಪ್ ವಾಹನಗಳ ಮೇಲೆ ಭಜರಂಗದಳದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿದಿನ ಮಾಂಸ ಸಾಗಿಸುತ್ತಿದ್ದನ್ನು ಗಮನಿಸಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ನಗರದ ಮೂರನೇ ರೈಲ್ವೆ ಗೇಟ್ ಬಳಿ ವಾಹನಗಳನ್ನು ತಡೆದಿದ್ದಾರೆ. ಚಾಲಕರ ಮೇಲೆ ಹಲ್ಲೆ ಮಾಡಿ, ವಾಹನವೊಂದರ ಗ್ಲಾಸನ್ನು ಒಡೆದು ಹಾಕಿದ್ದಾರೆ.

ಬಿಗುವಿನ ವಾತಾವರಣ ಏರ್ಪಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉದ್ಯಮಬಾಗ್ ಪೊಲೀಸರು ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಭಜರಂಗದಳದ ಕಾರ್ಯಕರ್ತರು ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಪೊಲೀಸರನ್ನು ಒತ್ತಾಯಿಸಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಉತ್ತರ ಶಾಸಕರಾದ ಅನಿಲ ಬೆನಕೆ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಉದ್ಯಮಬಾಗ ಪೊಲೀಸ್  ಠಾಣೆಗೆ ಬಂದು ಮಾಹಿತಿ ಪಡೆದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತಂತೆ ಯಾವುದೇ ಪ್ರಕರಣ ಮಾತ್ರ ದಾಖಲಾಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *