ಮನೆ ಮುಂದೆ ಪಾರ್ಕ್ ಮಾಡಿದ್ದ ಆಟೋಗೆ ದುಷ್ಕರ್ಮಿಗಳಿಂದ ಬೆಂಕಿ

Public TV
0 Min Read

ಬೆಂಗಳೂರು: ಮನೆ ಮುಂದೆ ಪಾರ್ಕ್ ಮಾಡಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಕೆಪಿ ಅಗ್ರಹಾರದ ಭುವನೇಶ್ವರಿನಗರ ಸಮೀಪದ ಅಯ್ಯಪ್ಪ ದೇವಸ್ಥಾನ ಬಳಿ ನಡೆದಿದೆ.

ಸುನೀಲ್ ಎಂಬವರಿಗೆ ಸೇರಿದ ಆಟೋ ರಿಕ್ಷಾ ದುಷ್ಕರ್ಮಿಗಳಿಂದ ಬೆಂಕಿಗಾಹುತಿಯಾಗಿದೆ. ತಡರಾತ್ರಿ 1.30ರ ವರೆಗೂ ಸುನೀಲ್ ಬಾಡಿಗೆಗೆ ಹೋಗಿ ಮನೆಗೆ ವಾಪಸ್ಸಾಗಿದ್ದರು. ಬೆಳಗಿನ ಜಾವ 3.30ರ ಸುಮಾರಿಗೆ ದುಷ್ಕರ್ಮಿಗಳು ಆಟೋಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಆಟೋರಿಕ್ಷಾ ಸುಟ್ಟು ಭಸ್ಮವಾಗಿದೆ.

ಸುನೀಲ್ ಕುಟುಂಬಕ್ಕೆ ಜೀವನಾಧಾರವಾಗಿದ್ದ ಆಟೋ ಬೆಂಕಿಗೆ ಆಹುತಿಯಾಗಿದ್ದು, ಇದೀಗ ಘಟನೆಯಿಂದ ಕುಟುಂಬ ಕಂಗಾಲಾಗಿದೆ. ಸದ್ಯ ಸ್ಥಳಕ್ಕೆ ಕೆಪಿ ಅಗ್ರಹಾರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *