ಕುಮಾರಸ್ವಾಮಿಯನ್ನ ಹಾಡಿಹೊಗಳಿದ ಕರ್ನಾಟಕ ಉಸ್ತುವಾರಿ ವೇಣುಗೋಪಾಲ್

Public TV
1 Min Read

ಬೆಂಗಳೂರು: ದೋಸ್ತಿ ಸರ್ಕಾರದ ಬಜೆಟ್ ಸವಾಲು ಇಂದು ಕೊನೆಗೊಂಡಿದೆ. ಈ ಬೆನ್ನಲ್ಲೇ ಕೈ ಬಳಗದಿಂದ ಪರ ಹಾಗೂ ವಿರೋಧ ವ್ಯಕ್ತವಾಗುತ್ತಿದ್ದು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಾಡಿ ಹೊಗಳಿದ್ದಾರೆ.

ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರೈತರ 34 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ ಕರ್ನಾಟಕದಲ್ಲಿ ಇತಿಹಾಸ ಬರೆದಿದ್ದಾರೆ. ಅಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯೋಜನೆಗಳನ್ನು ಮುಂದುವರಿಸಿದ್ದಾರೆ. ಇದೊಂದು ಆರ್ಥಿಕ ನಿರ್ವಾಹಣೆಯ ಬಜೆಟ್ ಆಗಿದೆ ಎಂದು ಹೇಳಿದರು.

ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಆದರೂ ಬಿಜೆಪಿಯವರು ಸುಮ್ಮನೆ ಇದು ಉತ್ತಮ ಬಜೆಟ್ ಅಲ್ಲ ಅಂತಾ ಆರೋಪ ಮಾಡುತ್ತಿದ್ದಾರೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *