ಧಾರವಾಡ ಜೆಡಿಎಸ್ ಸಭೆಯಲ್ಲಿ ಭಿನ್ನಮತ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

Public TV
1 Min Read

ಧಾರವಾಡ: ಜಿಲ್ಲಾ ಜೆಡಿಎಸ್ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.

ನಗರದ ನೌಕರ ಭವನದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿರುವ ಹಿನ್ನೆಲೆಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲು ಸಭೆ ಆಯೋಜಿಸಲಾಗಿತ್ತು.

ಸಭೆ ನಡೆಯುತ್ತಿದ್ದಂತೆ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂದು ಮುಖಂಡ ಗುರುರಾಜ ಹುಣಸಿಮರದ ಅವರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜಣ್ಣ ಕೊರವಿ ಬೆಂಬಲಿಗರು ಹಾಗೂ ಹುಣಸಿಮರದ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿದರು. ಇವರ ವರ್ತನೆಯಿಂದಾಗಿ ಬೇಸತ್ತ ಕೆಲ ಸದಸ್ಯರು ಸಭೆ ಹೊರನಡೆದರು.

Share This Article
Leave a Comment

Leave a Reply

Your email address will not be published. Required fields are marked *