ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ!

Public TV
1 Min Read

ಕೊಪ್ಪಳ: ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿ ಉಳಿದಿದೆ ಅನ್ನೋದಕ್ಕೆ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮುಖಂಡರು ಕಾರಣವಾಗಿದ್ದಾರೆ.

ಜಿಲ್ಲೆಯ ಕನಕಗಿರಿ ಕ್ಷೇತ್ರದಲ್ಲಿ ಬಿಜೆಪಿಯ ನೂತನ ಶಾಸಕರಾಗಿ ಇದೇ ಮೊದಲ ಬಾರಿಗೆ ಬಸವರಾಜ ದಡೆಸುಗುರು ಜಯಶಾಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಾದ್ಯಂತ ಶಾಸಕರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಿವೆ. ಹಾಗಾಗಿ ಇಂದು ಕನಕಗಿರಿ ಕ್ಷೇತ್ರದ ಗುಂಡೂರು ಗ್ರಾಮದಲ್ಲಿ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸನ್ಮಾನ ಮಾಡುವ ನೆಪದಲ್ಲಿ ಬಿಜೆಪಿ ಮುಖಂಡರು, ಶಾಸಕರಿಗೆ ಅವಮಾನ ಮಾಡಿದ್ದಾರೆ. ಗಣ್ಯರಿಗೆ ಕುಳಿತುಕೊಳ್ಳಲು ವೇದಿಕೆಯಲ್ಲಿ ಕುರ್ಚಿಗಳನ್ನು ಹಾಕಲಾಗಿತ್ತು. ಅದರಲ್ಲಿ ವಿಶೇಷವಾಗಿ 2 ದರ್ಬಾರ್ ಕುರ್ಚಿಗಳನ್ನು ವೇದಿಕೆಯ ಮಧ್ಯಭಾಗದಲ್ಲಿ ಹಾಕಲಾಗಿದೆ. ಆ ದರ್ಬಾರ್ ಕುರ್ಚಿಗಳಲ್ಲಿ ಬಿಜೆಪಿ ಮುಖಂಡರಾದ ಸಾಲೋಣಿ ನಾಗಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಕೂತಿದ್ದರು. ಅವರ ಪಕ್ಕದಲ್ಲೇ ಬೇರೆ ಕುರ್ಚಿಯಲ್ಲಿ ಕ್ಷೇತ್ರದ ಶಾಸಕರನ್ನು ಕೂರಿಸಲಾಗಿತ್ತು.

ಶಾಸಕ ಬಸವರಾಜ ದಡೆಸುಗುರು ಅವರು ದಲಿತರು ಎಂಬ ಕಾರಣಕ್ಕಾಗಿ ಅವರನ್ನು ಬೇರೆ ಕುರ್ಚಿಯನ್ನು ಹಾಕಿ ಕೂರಿಸಲಾಗಿತ್ತು. ಬಿಜೆಪಿ ಮುಖಂಡರ ಈ ತಾರತಮ್ಯ ನೀತಿ, ಕಾರ್ಯಕ್ರಮಕ್ಕೆ ಬಂದಿದ್ದ ಜನರಿಗೆ ಎದ್ದು ಕಾಣುವಂತಿತ್ತು.

Share This Article
Leave a Comment

Leave a Reply

Your email address will not be published. Required fields are marked *