ಸವದತ್ತಿ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯ ಕೊಲೆಗೆ ಯತ್ನ!

Public TV
1 Min Read

ಬೆಳಗಾವಿ: ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆನಂದ್ ಚೋಪ್ರಾರ ಕೊಲೆ ಯತ್ನ ನಡೆದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಎದುರು ಪರಾಜಿತಗೊಂಡಿದ್ದ ಆನಂದ್ ಚೋಪ್ರಾ ರವರು, ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಮಾರ್ಗ ಮಧ್ಯೆದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬುಲೆಟ್ ವಾಹನದ ಮೇಲೆ ಬಂದ ದುಷ್ಕರ್ಮಿಗಳು, ಆನಂದ್ ಚೋಪ್ರಾರವರ ಮೇಲೆ ರಾಡ್ ಮತ್ತು ಕೊಡಲಿಯಿಂದ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳನ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಆನಂದ್ ಅವರನ್ನು ಸವದತ್ತಿಯ ಖಾಸಗಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಜಕೀಯ ವೈಷಮ್ಯವೇ ಹಲ್ಲೆಗೆ ಕಾರಣ ಎಂದು ಶಂಕಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆನಂದ್ ಚೋಪ್ರಾ ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *