ಮಾಜಿ ಸಿಎಂ ಮನೆಗೆ ಕಾರು ನುಗ್ಗಿಸಿದವನ ಮೇಲೆ ಭದ್ರತಾ ಪಡೆ ಗುಂಡಿನ ದಾಳಿ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.

ಅಪರಿಚಿತ ವ್ಯಕ್ತಿಯೋರ್ವ ನಿರಾಯುಧನಾಗಿ ತನ್ನ ಮಹೀಂದ್ರ ಎಕ್ಸ್ ಯುವಿ 500 ವಾಹನದೊಂದಿಗೆ ಏಕಾಏಕಿ ಫಾರೂಕ್ ಅಬ್ದುಲ್ಲಾ ಮನೆಯ ಗೇಟಿನಲ್ಲಿ ನುಗ್ಗಿಸಿದ್ದಾನೆ. ಬಳಿಕ ಮನೆಯ ಒಳಗೆ ಹೋಗಿ ಗಾಜಿನ ಮೇಜನ್ನು ಒಡೆದು ಹಾಕಿದ್ದಾನೆ. ಅಲ್ಲದೇ ವ್ಯಕ್ತಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಯ ಮೇಲೂ ಸಹ ಹಲ್ಲೆ ನಡೆಸಿದ್ದ ಈ ವೇಳೆ ಭದ್ರತೆಯ ದೃಷ್ಟಿಯಿಂದ ಸಿಬ್ಬಂದಿ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯಾದ ವಿವೇಕ್ ಗುಪ್ತ ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯು ಮನೆಯ ಕೋಣೆಯ ಬಳಿ ಹೊಡೆದು ಹಾಕಿದೆ. ಮೃತ ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಈತ ಜಮ್ಮು ಕಾಶ್ಮೀರದ ಫೂಂಚ್ ಜಿಲ್ಲೆಯವನಾಗಿದ್ದಾನೆ. ಘಟನೆಯಲ್ಲಿ ಶಂಕಿತ ವ್ಯಕ್ತಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಯೂ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿರುವ ಫಾರೂಕ್ ಅಬ್ದುಲ್ಲಾ ಅವರ ಪುತ್ರ ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ನಡೆದ ಸಂದರ್ಭ ಫಾರೂಕ್ ಅಬ್ದುಲ್ಲಾರವರು ಮನೆಯಲ್ಲಿ ಇಲ್ಲವಾದ್ದರಿಂದ ಆಗಬಹುದಾಗಿದ್ದ ಅವಘಡ ತಪ್ಪಿದೆ. ಹಾಲಿ ಶ್ರೀನಗರದ ಸಂಸದರಾಗಿರುವ ಫಾರೂಕ್ ಅಬ್ದುಲ್ಲಾರವರಿಗೆ ಕೇಂದ್ರ ಸರ್ಕಾರ ಜೆಡ್ ಫ್ಲಸ್ ಭದ್ರತೆಯನ್ನು ನೀಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *