ಕಾರವಾರ, ಹಾಸನ, ಮಲೆನಾಡಿನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತ!

Public TV
1 Min Read

ಕಾರವಾರ: ಹಾಸನ, ಕಾರವಾರ, ಮಲೆನಾಡಿನಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಗುಡ್ಡ ಕುಸಿದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಈ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ಬಳಿ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದ ಶ್ರೀದುರ್ಗಾಂಬಾ ಖಾಸಗಿ ಬಸ್ ಮೇಲೆ ಗುಡ್ಡ ಕುಸಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಜಾನೆ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 63 ಹುಬ್ಬಳ್ಳಿ-ಅಂಕೋಲಾ ನಡುವಿನ ಸಂಚಾರ ಕೆಲವು ಗಂಟೆಗಳ ಕಾಲ ಸ್ಥಗಿತವಾಗಿದ್ದು, ಸ್ಥಳಕ್ಕೆ ಆಗಮಿಸಿದ ಯಲ್ಲಾಪುರ ಪೊಲೀಸರು ಕುಸಿದ ಮಣ್ಣನ್ನು ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಷ್ಟೇ ಅಲ್ಲದೇ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ನಿರಂತರ ಮಳೆ ಹಿನ್ನೆಲೆ ರಸ್ತೆ ಮೇಲೆ ಗುಡ್ಡ ಕುಸಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರ ಮಾರನಹಳ್ಳಿ ಬಳಿ ಘಟನೆ ನಡೆದಿದೆ. ಇದರಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಶಿರಾಡಿಘಾಟ್ ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಮಾಡಲಾಗಿದೆ. ಗುಡ್ಡ ತೆರವು ಕಾರ್ಯ ಆರಂಭವಾಗಿದ್ದು, ಬಂದ್ ಹಿನ್ನೆಲೆ ಚಾರ್ಮಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ದಾರಿ ಮಾಡಿಕೊಡಲಾಗಿದೆ.

ಇನ್ನು ಮಲೆನಾಡಿನಲ್ಲೂ ಧಾರಾಕಾರ ಮಳೆ ಹಿನ್ನಲೆ ಸೋಲ್ಲಾಪುರ- ಮಂಗಳೂರು ರಾಜ್ಯ ಹೆದ್ದಾರಿ 169 ಮುಳುಗಡೆಯಾಗಿದೆ. ನೆಮ್ಮಾರು ಗ್ರಾಮದ ಬಳಿ ಮುಳುಗಡೆಯಾದ ರಾಜ್ಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ನೆಮ್ಮಾರು ರಸ್ತೆಯ ಮೇಲೆ ಹುಕ್ಕಿ ಹರಿಯುತ್ತಿರುವ ತುಂಗಾ ನದಿಯಿಂದಾಗಿ ರಾಜ್ಯ ಹೆದ್ದಾರಿ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ವಾಹನ ಸವಾರರು ರಸ್ತೆ ಸಂಪರ್ಕವಿಲ್ಲದೆ ಪರದಾಟ ಪಡುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *