ತುಂಗಭದ್ರಾ ಜಲಾಶಯ ಎಲ್ಲಾ ಗೇಟ್ ಓಪನ್ – ಗಂಗಾವತಿ ಕಂಪ್ಲಿ ಸೇತುವೆ ಮುಳುಗಡೆ

Public TV
1 Min Read

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಜಲಾಶಯದ ಎಲ್ಲಾ ಗೇಟುಗಳ ಮೂಲಕ ನೀರನ್ನು ನದಿಗೆ ಹರಿದು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.

ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ ಮಂಗಳವಾರ ರಾತ್ರಿಯೇ ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅಲ್ಲದೇ ಮುನ್ನೆಚ್ಚರಿಕಾ ದೃಷ್ಟಿಯಿಂದ ಸೇತುವೆ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಚಿಕ್ಕ ಜಂತಕಲ್ ಸೇತುವೆಯನು 1961ರಲ್ಲಿ ನಿರ್ಮಿಸಲಾಗಿದ್ದು, ಕಳೆದ 10 ವರ್ಷದ ಹಿಂದೆ ಈ ಸೇತುವೆ ಶೀತಲಗೊಂಡ ಬಗ್ಗೆ ಗಂಗಾವತಿ ಲೋಕೋಪಯೋಗಿ ಇಲಾಖೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತ್ತು. ಇದೇ ವೇಳೆ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲು ಮನವಿ ಸಲ್ಲಿಸಿಲಾಗಿತ್ತು. ಆದರೆ ಈ ಕುರಿತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದ್ದು, ಸೇತುವೆ ಭಾರೀ ವಾಹನ ಓಡಾಟಕ್ಕೆ ನಿಷೇಧಸಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪ್ರತಿ ಸಾರಿ ತುಂಗಾಭದ್ರಾ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಟ್ಟಾಗಲೆಲ್ಲಾ ಸೇತುವೆ ಮೇಲೆ ನೀರು ಹರಿದು ಬರುತ್ತಿದ್ದು ಪ್ರಯಾಣಿಕರಿಗೆ ಸಂಕಷ್ಟ ತಂದಿದೆ. ಗಂಗಾವತಿಯಿಂದ ಕೇವಲ 5 ಕಿಮೀ ದೂರದಲ್ಲಿರುವ ಕಂಪ್ಲಿಗೆ ತೆರಳಲು ಈ ಮಾರ್ಗ ಹತ್ತಿರವಾಗಿದ್ದು, ಸಂಪರ್ಕ ಕಡಿತಗೊಂಡರೆ ಸುಮಾರು 50 ಕಿಮೀ ಹೆಚ್ಚು ಪ್ರಯಾಣ ನಡೆಸಬೇಕಾಗುತ್ತದೆ.

ಸದ್ಯ ಈ ಮಾರ್ಗದ ಪರ್ಯಾಯವಾಗಿ ಗಂಗಾವತಿಯ ಕಡೆಬಾಗಿಲು ಬುಕ್ಕಸಾಗರ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದೇ ವೇಳೆ ನದಿಯಲ್ಲಿ ಹೆಚ್ಚು ನೀರು ಹರಿದುಹೋಗುತ್ತಿರುವುದರಿಂದ ಸಾರ್ವಜನಿಕರು ಅಪಾಯವನ್ನು ಲೆಕ್ಕಿಸದೇ ಸೆಲ್ಫಿ ಕ್ಲಿಕ್ಕಿಸುತ್ತಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *