ಡ್ಯಾಂ ನೋಡಲು ಬಂದ ಜನಸಾಗರ – 10ಕ್ಕೂ ಹೆಚ್ಚು ಅಪಘಾತ, ಓರ್ವ ಸಾವು, 25 ಮಂದಿಗೆ ಗಾಯ

Public TV
1 Min Read

ಬಳ್ಳಾರಿ: ತುಂಗಭದ್ರಾ ಡ್ಯಾಂನ 32 ಕ್ರಸ್ಟ್ ಗೆಟ್ ಮೂಲಕ ಒಂದು ಲಕ್ಷಕ್ಕೂ ಹೆಚ್ಚು ನೀರು ನದಿಯ ಮೂಲಕ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಡ್ಯಾಂ ನೋಡಲು ಜನಸಾಗರ ಬಂದಿದ್ದು, ಹತ್ತಕ್ಕೂ ಹೆಚ್ಚು ಅಪಘಾತಗಳು ನಡೆದಿದೆ.

ಟಿಬಿ ಡ್ಯಾಮ್ ಸುರಂಗ ಮಾರ್ಗದ ಬಳಿ ಅಪಘಾತ ಸಂಭವಿಸಿದ್ದು, ಮರಿಯಮ್ಮನಹಳ್ಳಿ ನಿವಾಸಿ ಅನಿಲ್ ಕುಮಾರ್ ಶೆಟ್ಟಿ (23) ಮೃತ ಪಟ್ಟಿದ್ದಾನೆ. ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಪರಿಣಾಮ ಸ್ಥಳದಲ್ಲೇ ಅನಿಲ್ ಮೃತಪಟ್ಟಿದ್ದಾನೆ. ಈತನ ಜೊತೆಯಲ್ಲಿದ್ದ ಮತ್ತೊಬ್ಬನಿಗೆ ಗಂಭೀರವಾಗಿ ಗಾಯವಾಗಿದೆ.

ಇತ್ತ ಗುಂಡ ಪಾರಿಸ್ಟ್ ಬಳಿ ಟಾಟಾ ಸೋಮೊ ಮತ್ತು ಬಸ್ಸು ಡಿಕ್ಕಿಯಾಗಿ ನಾಲ್ಕು ಜನರಿಗೆ ಗಾಯವಾಗಿದೆ. ಗಾಯಗೊಂಡವರನ್ನು ಹನುಮಕ್ಕ (25), ಶೇಬಕ್(30) ಮತ್ತು ಪಾರಮ್ಮ (65) ಎಂದು ಗುರುತಿಸಲಾಗಿದೆ. ಬೇರೆ ಬೇರೆ ಅಪಘಾತದಲ್ಲಿ ರಾಘವೇಂದ್ರ(25), ವೆಂಕಣ್ಣ ಗೌಡ(56) ಸೇರಿದಂತೆ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಲ್ಲಿ ಗಾಯಗೊಂಡವರನ್ನು ಹೊಸಪೇಟೆ ಸಾರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ.

ಅನೇಕ ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ತುಂಗಭದ್ರಾ ನದಿ ಕೂಡ ತುಂಬಿ ಹರಿಯುತ್ತಿದ್ದು, ಬುಧವಾರ ನದಿಯ ಒಳಹರಿವು ಹೆಚ್ಚಾದ ಕಾರಣ 32 ಕ್ರಸ್ಟ್ ಗೇಟ್ ಗಳ ಮೂಲಕ ಸುಮಾರು ಒಂದು ಲಕ್ಷಕ್ಕಿಂತಲೂ ಅಧಿಕ ನೀರನ್ನು ಹೊರ ಬಿಡಲಾಗಿದೆ. ಆದ್ದರಿಂದ ಜನರು ಡ್ಯಾಂ ನೋಡಲು ಬಂದಿದ್ದಾರೆ. ಈ ವೇಳೆ ಕೆಲವು ಅಪಘಾತ ಸಂಭವಿಸಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *