ಕೊಡಗಿನಲ್ಲಿ ಮತ್ತೆ 4 ದಿನ ಭಾರೀ ಮಳೆ- ಆ.31 ರವರೆಗೆ ಪ್ರವಾಸಿಗರಿಗೆ ನಿರ್ಬಂಧ

Public TV
1 Min Read

– ಆದೇಶ ನಿರಾಕರಿಸಿದ್ರೆ ಕೇಸ್ ಹಾಕಲು ಡಿಸಿ ಸೂಚನೆ

ಮಡಿಕೇರಿ: ಪ್ರವಾಹ ಪೀಡಿತ ಕೊಡಗಿಗೆ ಕೆಲವು ದಿನಗಳ ಕಾಲ ತಪ್ಪಿದ್ದ ವರುಣನ ಕಾಟ ಮತ್ತೆ ಶುರುವಾಗಲಿದ್ದು, ಇತ್ತ ಕರ್ನಾಟಕ ಕಾಶ್ಮೀರಕ್ಕೆ ಪ್ರವಾಸಿಗರಿಗೆ ಆಗಸ್ಟ್ 31ರವರೆಗೆ ನಿರ್ಬಂಧ ಹಾಕಲಾಗಿದೆ.

ಕೊಡಗು, ಕರಾವಳಿಯಲ್ಲಿ ಮತ್ತೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇತ್ತ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕೊಡಗಿಗೆ ಆಗಸ್ಟ್ 31ರವರೆಗೆ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.

ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 31ರವರೆಗೆ ಕೊಡಗು ಪ್ರವಾಸಕ್ಕೆ ಬರಬೇಡಿ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಅಧಿಕಾರಗಳ ಆದೇಶವನ್ನು ನಿರಾಕರಿಸಿ ಪ್ರವಾಸಿಗರ ವಾಸ್ತವ್ಯಕ್ಕೆ ಅನುವು ಮಾಡಿಕೊಡುವ ಹೋಟೆಲ್ ರೆಸಾರ್ಟ್ ಮತ್ತು ಹೋಂಸ್ಟೇಗಳ ಮೇಲು ಕೇಸ್ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಕೊಡಗಿಗೆ ಹೆಚ್ಚಿನ ಪ್ರವಾಸಿಗರು ಬಂದರೆ ರಸ್ತೆ ರಿಪೇರಿ ಕಷ್ಟವಾಗುತ್ತದೆ. ಅಷ್ಟೇ ಅಲ್ಲದೇ ಕಾರ್ಯಾಚರಣೆಗೂ ತೊಂದರೆ ಆಗುತ್ತದೆ. ಆದ್ದರಿಂದ ಯಾರು ಕೊಡಗು ಪ್ರವಾಸಕ್ಕೆ ಸ್ವಲ್ಪ ದಿನ ಬರಬೇಡಿ ಅಂತ ಡಿಸಿ ಮನವಿ ಮಾಡಿದ್ದಾರೆ. ಆದರೆ ಈ ಆದೇಶಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಕೊಡಗಿನ ಜೀವನಾಡಿಯ ಪ್ರವಾಸೋದ್ಯಮ. ಇದನ್ನ ನಿಲ್ಲಿಸಿದರೆ ಕೊಡಗು ಹೇಗೆ ಚೇತರಿಸಿಕೊಳ್ಳುವುದು. ಆದ್ದರಿಂದ ಕೂಡಲೇ ಆದೇಶ ಹಿಂಪಡೆಯಿರಿ ಎಂದು ಸಂಘ ಡಿ.ಸಿಗೆ ಮನವಿ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *