ಅಕ್ಷರಸ್ಥರನ್ನಾಗಿ ಮಾಡಿದ್ದ ಗುರುವಿನ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಿ ಆರಾಧನೆ

Public TV
1 Min Read

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಅಥರಗಾ ಗ್ರಾಮದಲ್ಲಿ ಹೆಣ್ಣು ಮಕ್ಕಳ ಸರ್ಕಾರಿ ಶಾಲೆಯೊಂದರಲ್ಲಿ ಅಕ್ಷರಸ್ಥರನ್ನಾಗಿ ಮಾಡಿದ್ದ ಗುರುವಿನ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ.

ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಾಗಿರುವ ಇದು 106 ವರ್ಷದ ಹಳೆಯದಾಗಿದ್ದು, ಅಲ್ಲಿ ಈ ಶಾಲೆಯ ಶಿಕ್ಷಕ ರೇವಣಸಿದ್ದ ಎಂಬವರ ದೇವಾಲಯವನ್ನು ಕಟ್ಟಿಸಿದ್ದಾರೆ. ರೇವಣಸಿದ್ದ ಶಿಕ್ಷಕರು ವಿಜಯಪುರದ ಮನಗೂಳಿ ಗ್ರಾಮದಲ್ಲಿ 1925 ಜನಿಸಿ ನಂತರ ಶಿಕ್ಷಕರಾಗಿ ಅಥರಗಾ ಗ್ರಾಮದಲ್ಲಿ 30 ವರ್ಷ ಸೇವೆಸಲ್ಲಿದ್ದರು. ಅನಕ್ಷರತೆ, ಬಡತನ ಸೇರಿದಂತೆ ಶಾಲೆ ಬಿಟ್ಟ ಮಕ್ಕಳು ಹೆಚ್ಚಿಗಿದ್ದರು. ಆಗ ರೇವಣಸಿದ್ದ ಶಿಕ್ಷಕರು ದೊಡ್ಡವರಿಂದ ಹಿಡಿದು ಎಲ್ಲ ಮಕ್ಕಳಿಗೂ ಅಕ್ಷರಸ್ಥರನ್ನಾಗಿ ಮಾಡಲು ಶ್ರಮಿಸಿದ್ದರು.

ಅದಕ್ಕಾಗಿ ಅವರ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೇರಿ ಅವರು ತೀರಿ ಹೋದ ಮೇಲೆ ಶಾಲೆಯಲ್ಲಿ ಅವರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಿ ದೇವಾಲಯವನ್ನೆ ಕಟ್ಟಿಸಿದ್ದಾರೆ. ಪ್ರತಿ ನಿತ್ಯ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಅವರಿಗೆ ಪೂಜೆ ಪುನಸ್ಕಾರ ನೆರವೇರುಸುತ್ತಾ ಬಂದಿದ್ದು, ಅವರನ್ನು ದೇವರ ಸಮಾನರಾಗಿ ಕಾಣುತ್ತಾರೆ.

ಗುರು ಬ್ರಹ್ಮ ಗುರು ವಿಷ್ಣು ಗುರುದೇವೊ ಮಹೇಶ್ವರ ಎಂಬಂತೆ ಇಲ್ಲಿ ರೇವಣಸಿದ್ದ ಶಿಕ್ಷಕರನ್ನು ದೇವರ ಸಮಾನರಾಗಿ ಕಾಣುವುದರ ಜೊತೆಗೆ ಅವರನ್ನು ದೇವರಂತೆ ಪೂಜಿಸುತ್ತಿರುವುದು ಶಿಕ್ಷಕ ವೃತ್ತಿಗೆ ಸಂದ ಅಭೂತ ಪೂರ್ವ ಗೌರವವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *