ವಿಜಯಪುರದ ಉಸ್ತುವಾರಿ ಸಚಿವರ ಎದುರಲ್ಲೇ ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ!

Public TV
0 Min Read

ವಿಜಯಪುರ: ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರೂ ತೋಟಗಾರಿಕ ಸಚಿವ ಎಂ.ಸಿ ಮನಗೂಳಿ ಸುಮ್ಮನೆ ಕುಳಿತ್ತಿದ್ದಕ್ಕೆ ಟೀಕೆ ವ್ಯಕ್ತವಾಗಿದೆ.

ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ ಮನಗೂಳಿ ಅವರು ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ವಿದೇಶಿ ಅಧಿಕಾರಿಗಳ ಜೊತೆಗೆ ಚರ್ಚೆ ಸಂದರ್ಭದಲ್ಲಿ ಟೇಬಲ್ ಮೇಲೆ ತ್ರಿವರ್ಣ ಧ್ವಜವನ್ನು ತಲೆ ಕೆಳಗಾಗಿ ಇಡಲಾಗಿತ್ತು.

ಚರ್ಚೆ ನಡೆಸುತ್ತಿದ್ದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಡವಟ್ಟಾಗಿದ್ದರೆ ಧ್ವಜವನ್ನು ಸರಿಪಡಿಸಬಹುದಾಗಿತ್ತು. ಆದರೆ ಕರ್ನಾಟಕದ ಅಧಿಕಾರಿಗಳು ಮತ್ತು ಸಚಿವರು ಯಾಕೆ ಗಮನ ನೀಡಿಲ್ಲ ಎಂದು ಜನರು ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *