ರಾಮನಗರದಲ್ಲಿ ಬಿಜೆಪಿಗೆ ಸೋಲುವ ಭೀತಿ- ಪ್ರಚಾರಕ್ಕೆ ಇಳಿಯದ ಕಮಲ ಮುಖಂಡರು

Public TV
1 Min Read

ರಾಮನಗರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ರಾಮನಗರ ಉಪಚುನಾವಣೆ ರಂಗೇರುತ್ತಿದೆ. ಆದರೆ ಅದ್ಯಾಕೋ ಬಿಜೆಪಿ ನಾಯಕರು ಪ್ರಚಾರಕ್ಕೆ ನಿರುತ್ಸಾಹ ತೋರುತ್ತಿದ್ದು, ಸೋಲುವ ಭಯದಿಂದ ಹೀಗೆ ಮಾಡುತ್ತಿದ್ದಾರೋ ಎಂದು ಭಾರೀ ಚರ್ಚೆಯಾಗುತ್ತಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಕ್ಷೇತ್ರದ ಬಿಜೆಪಿ ಉಸ್ತುವಾರಿ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಶಾಸಕ ಸಿ.ಪಿ ಯೋಗೇಶ್ವರ್ ರಾಮನಗರ ಕಡೆಗೆ ಮುಖ ಮಾಡಿಲ್ಲ. ಆದರೆ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಅವರು ಅಲ್ಲಲ್ಲಿ ಪ್ರಚಾರ ನಡೆಸುತ್ತಿದ್ದು, ತೆರೆಮರೆಯಲ್ಲಿ ಅತೃಪ್ತ ಕಾಂಗ್ರೆಸ್ ಮುಖಂಡರನ್ನು ಸೆಳೆಯುವ ಯತ್ನಕ್ಕೆ ಕೈ ಹಾಕಿದ್ದಾರಂತೆ.

 

ಮೂರು ಲೋಕಸಭಾ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳಿಗೆ ನೀಡಿದಷ್ಟು ಮಹತ್ವದಲ್ಲಿ ಅರ್ಧದಷ್ಟು ಪ್ರಾಧಾನ್ಯತೆಯನ್ನ ರಾಮನಗರಕ್ಕೆ ನೀಡುವಲ್ಲಿ ಬಿಜೆಪಿ ನಿರುತ್ಸಾಹ ತೋರಿದೆ. ಕ್ಷೇತ್ರದಲ್ಲಿ ಅಬ್ಬರದ ಪ್ರಚಾರಕ್ಕೆ ಇಳಿಯಲು ಮುಖಂಡರ ಹಿಂದೇಟು ಹಾಕುವ ಮೂಲಕ ನೆಪ ಮಾತ್ರಕ್ಕೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದಾರಾ ಎನ್ನುವ ಸಂಶಯ ಕ್ಷೇತ್ರದಲ್ಲಿ ವ್ಯಕ್ತವಾಗಿವೆ. ಜೆಡಿಎಸ್‍ನ ಭದ್ರಕೋಟೆಯಾಗಿರುವ ರಾಮನಗರವು ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರವಾಗಿದ್ದು, ಬಿಜೆಪಿಯಲ್ಲಿನ ಒಕ್ಕಲಿಗ ನಾಯಕರು ಸಹ ರಾಮನಗರಕ್ಕೆ ಬರಲು ಹಿಂದೇಟು ಹಾಕಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಯಾಗಿ ಸಾಕಷ್ಟು ರಣತಂತ್ರ ರೂಪಿಸುತ್ತಿದ್ದು, ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಸಂಸದ ಡಿ.ಕೆ.ಸುರೇಶ್ ಅವರು ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಬಾರಿಯೂ ಬಿಜೆಪಿ ಸೋಲುವುದು ನಿಶ್ಚಿತ ಅಂತಾ ಕ್ಷೇತ್ರದ ಜನರು ಮಾತಾಡುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *