ಭಾರೀ ಅನಾಹುತದಿಂದ ಬದುಕುಳಿದ ಐದು ವಿದ್ಯಾರ್ಥಿಗಳು!

Public TV
1 Min Read

ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ, ವಿದ್ಯಾರ್ಥಿಗಳಲ್ಲಿ ಐವರು ನೀರಿನ ಪ್ರವಾಹಕ್ಕೆ ಸಿಲುಕಿ, ಬದುಕುಳಿದ ಘಟನೆ ಮಂಗಳೂರು ತಾಲೂಕಿನ ನಾವೂರ ಗ್ರಾಮದಲ್ಲಿ ನಡೆದಿದೆ.

ವಾಲ್ಮೀಕಿ ಜಯಂತಿ ನಿಮಿತ್ತ ಇಂದು ಶಾಲಾಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿತ್ತು. ಹೀಗಾಗಿ ನಾವೂರ ಗ್ರಾಮ ಸಮೀಪದ ಲಕ್ಷ್ಮಿ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ಹರಿಯುವ ನೇತ್ರಾವತಿ ನದಿಗೆ 11 ಜನರ ವಿದ್ಯಾರ್ಥಿಗಳ ತಂಡ ಈಜಾಡಲು ತೆರಳಿತ್ತು. ಈ ವೇಳೆ ಶಂಭೂರು ಎಎಂಆರ್ ಡ್ಯಾಂನಿಂದ ಏಕಾಏಕಿ ನೀರನ್ನು ಹೊರಬಿಡಲಾಗಿತ್ತು. ನೀರಿನ ರಭಸವನ್ನು ಗಮನಿಸಿದ 6 ಮಂದಿ ವಿದ್ಯಾರ್ಥಿಗಳು ಈಜಿ ದಡ ಸೇರಿದ್ದಾರೆ.

ಉಳಿದ ಐವರು ವಿದ್ಯಾರ್ಥಿಗಳಿಗೆ ಈಜಲು ಸಾಧ್ಯವಾಗದೇ ನದಿಯ ಇನ್ನೊಂದು ಬದಿಯ ದೊಡ್ಡ ಬಂಡೆಯ ಮೇಲೆ ಹತ್ತಿದ್ದಾರೆ. ಮಕ್ಕಳು ಅಲ್ಲಿಂದ ಪಾರಾಗಲು ಪರದಾಡುವಂತಾಗಿತ್ತು. ನದಿಯ ದಂಡೆ ಸೇರಿದ್ದ 6 ವಿದ್ಯಾರ್ಥಿಗಳು ಬೊಬ್ಬೆ ಹಾಗೂ ಕಿರುಚಾಟ ಕೇಳಿಸಿಕೊಂಡ, ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ನಿರತರಾದರು. ಹಗ್ಗ ಕೊಟ್ಟು ಒಬ್ಬೊಬ್ಬರನ್ನೇ ರಕ್ಷಿಸಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿ, ವಿದ್ಯಾರ್ಥಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡು, ನಿಮಗೆ ನದಿಯ ಆಳ ಗೊತ್ತಿಲ್ಲದಿದ್ದರೆ ಸ್ಥಳೀಯರನ್ನು ಕೇಳಬೇಕಿತ್ತು. ಯಾರೇ ಪ್ರಾಣ ಹೋಗಿದ್ದರೂ ನಷ್ಟ ಅಲ್ಲವೇ. ಡ್ಯಾಂ ಹತ್ತಿರವೇ ಇದೆ. ನಿಮಗೆ ಈಜಾಡುವ ಉದ್ದೇಶವಿದ್ದರೆ ಮಾಹಿತಿ ಪಡೆಯಬೇಕಿತ್ತು. ಒಂದು ವೇಳೆ ಸ್ಥಳೀಯರು ಬಾರದಿದ್ದರೇ ಐವರ ಜೀವವೇ ಹೋಗುತ್ತಿತ್ತು ಎಂದು ಎಚ್ಚರಿಕೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *