ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಸಿಎಂ ಭೇಟಿ

Public TV
1 Min Read

ಉಡುಪಿ: ಇಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊಲ್ಲೂರಿಗೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಶಿವಮೊಗ್ಗ ಲೋಕಸಭಾ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಉಡುಪಿಗೆ ಆಗಮಿಸಲಿದ್ದಾರೆ. ಅರೆಶೀರೂರು ಹೆಲಿಪ್ಯಾಡ್ ನಲ್ಲಿ ಇಳಿದು ರಸ್ತೆ ಮಾರ್ಗ ಮೂಲಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕೊಲ್ಲೂರು ಸಿಎಂ ದೇವಸ್ಥಾನ ಆಗಮನ ಸಾಧ್ಯತೆಯಿದೆ. ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ದೇವಸ್ಥಾನ ಭೇಟಿ ಮಹತ್ವ ಪಡೆದಿದೆ. ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ, ನಂತರ ಬೈಂದೂರು ತಾಲೂಕಿನ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ತ್ರಾಸಿಯಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರಚಾರ ಸಭೆಯ ಬಳಿಕ ಅಲ್ಲೇ ಭೋಜನ ಸ್ವೀಕರಿಸಿ 2 ಗಂಟೆಗೆ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕವೇ ಸಿಎಂ ವಾಪಾಸ್ ತೆರಳಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *