ಉಪಚುನಾವಣೆಯ ಫಲಿತಾಂಶ ನೋಡಿ ಸಿಟ್ಟಾದ ಮೋದಿ, ಅಮಿತ್ ಶಾ!

Public TV
1 Min Read

ಬೆಂಗಳೂರು: ಬಳ್ಳಾರಿ, ಮಂಡ್ಯ, ಶಿವಮೊಗ್ಗ ಉಪಚುನಾವಣಾ ಫಲಿತಾಂಶದ ಸೀಕ್ರೆಟ್ ರಿಪೋರ್ಟ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ರವಾನೆಯಾಗಿದೆ.

ಹೌದು. 3 ಲೋಕಸಭಾ ಉಪಚುನಾವಣೆಯ ಫಲಿತಾಂಶ ನೋಡಿ ಪ್ರಧಾನಿ ಮೋದಿ, ಶಾ ಸಿಟ್ಟಾಗಿದ್ದಾರೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಈ ಚುನಾವಣೆಗೆ ರಾಜ್ಯ ಬಿಜೆಪಿ ನಾಯಕರು ಸಂಘಟಿತ ಹೋರಾಟ ನಡೆಸಿಲ್ಲ. ಅಷ್ಟೇ ಅಲ್ಲದೇ ಸರಿಯಾದ ಅಭ್ಯರ್ಥಿಗಳನ್ನು ನಿಲ್ಲಿಸುವಲ್ಲಿ ವಿಫಲವಾಗಿದ್ದರಿಂದ ಸೋಲಾಗಿದೆ ಎನ್ನುವ ಅಂಶ ಮೋದಿಗೆ ರವಾನೆಯಾದ ಸೀಕ್ರೆಟ್ ರಿಪೋರ್ಟ್ ನಲ್ಲಿ ಉಲ್ಲೇಖವಾಗಿದೆ.

ಈ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಮೋದಿಯನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡಿಲ್ಲ. ಹೀಗಾಗಿ 5ರ ಪೈಕಿ 4ರಲ್ಲಿ ಸೋಲಾಯಿತು ಎನ್ನುವ ವಿಶ್ಲೇಷಣೆಯೂ ಕೇಳಿಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಕರ್ನಾಟಕದಿಂದ ಗೆಲ್ಲಬೇಕು ಎನ್ನುವ ಗುರಿಯನ್ನು ಅಮಿತ್ ಶಾ ಹಾಕಿಕೊಂಡಿದ್ದಾರೆ. ಆದರೆ ಈ ಫಲಿತಾಂಶ ನೋಡಿ ಅಮಿತ್ ಶಾ ಪಂಚರಾಜ್ಯಗಳ ಚುನಾವಣೆಯ ಬಳಿಕ ಮತ್ತೆ ರಾಜ್ಯಕ್ಕೆ ಬಂದು ಪಕ್ಷ ಸಂಘಟಿಸುತ್ತಾರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಕರ್ನಾಟಕದಲ್ಲಿ ಒಂದು ವೇಳೆ ಮೈತ್ರಿ ಆದ್ರೆ ಅದು ಬಿಜೆಪಿಗೆ ದೊಡ್ಡ ಹೊಡೆತ ಬೀಳಲಿದೆ. 15 ರಿಂದ 17 ಸ್ಥಾನಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿತ್ತು. ಈ ಭವಿಷ್ಯ ನಿಜವಾಗು ರೀತಿಯಲ್ಲಿ ಇಂದಿನ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಈಗ ಆತ್ಮಾವಲೋಕನಕ್ಕೆ ಮುಂದಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *