ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

Public TV
1 Min Read

ಬೆಂಗಳೂರು: ಇತ್ತೀಚೆಗಷ್ಟೇ ಪೊಲೀಸ್ ಪೇದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಲೀಕ್ ಮಾಡಿದ್ದ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸ್ವಾಮೀಜಿಯೊಬ್ಬರ ಹೆಸರು ಹೊರಬಂದಿದ್ದು, ಸ್ಫೋಟಕ ಮಾಹಿತಿ ಬಯಲಾಗಿದೆ.

ಕಲ್ಮಠ ಸ್ವಾಮಿಯ ಹೆಸರು ಕೇಳಿ ಬಂದಿದೆ. ಪ್ರಶ್ನೆ ಪತ್ರಿಕೆ ಲೀಕ್ ಮಾಡುವುದರಲ್ಲಿ ಎಕ್ಸ್ ಪರ್ಟ್ ಆಗಿರುವ ಶಿವಕುಮಾರ ಸ್ವಾಮೀಜಿಯನ್ನು ಸಿಸಿಬಿ ವಿಚಾರಣೆಯನ್ನು ಮಾಡುತ್ತಿದ್ದು, ಸಾಕಷ್ಟು ಅಂಶಗಳು ಬೆಳಕಿಗೆ ಬರುತ್ತಿವೆ. ಕಲ್ಮಠ ಸ್ವಾಮಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಅಭ್ಯರ್ಥಿಗಳಿಗೆ ಟ್ರೈನಿಂಗ್ ಕೊಡುತ್ತಿದ್ದ ಎಂದು ಗೊತ್ತಾಗಿದೆ.

6 ಲಕ್ಷ ಕೊಟ್ಟವರಿಗೆ ನೂರು ಪ್ರಶ್ನೆ ಉಚಿತ ಎಂದು ಹೇಳುತ್ತಾ 15 ಕೋಟಿ ಹಣ ವಸೂಲಿ ಮಾಡಿ ಅಭ್ಯರ್ಥಿಗಳಿಗೆ ಶಿವಕುಮಾರ್ ಟ್ರೈನಿಂಗ್ ಕೊಡುತ್ತಿದ್ದನು. ಈತ ಪ್ರಶ್ನೆ ಪತ್ರಿಕೆಯ ಮುಖ್ಯ ಪೇಜ್‍ನ್ನೇ ಕದಿಯುತ್ತಿದ್ದನು. ಬಳಿಕ ಜನರಿಲ್ಲದ ರೆಸಾರ್ಟ್ ಒಂದರಲ್ಲಿ ಟ್ರೈನಿಂಗ್ ಕೊಡುತ್ತಿದ್ದನು ಎಂದು ತಿಳಿದು ಬಂದಿದೆ.

ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡನ ನಂಟು ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಬಸವರಾಜ್ ಅಲಿಯಾಸ್ ಬಸವ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದವನಾಗಿದ್ದು, 110 ಜನ ಹುಡುಗರು, 10 ಜನ ಹುಡುಗಿಯರು ಕೂಡ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ರಾಸಲೀಲೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಕಲ್ಮಠ ಸ್ವಾಮಿ ಈಗ ಮತ್ತೆ ಪ್ರಶ್ನೆ ಪತ್ರಿಕೆಯ ಉರುಳು ಸಿಕ್ಕಿಬಿದ್ದಿದೆ. ಪ್ರಶ್ನೆ ಪತ್ರಿಕೆಯ ಲೀಕ್ ದಂಧೆ ಗೊತ್ತಿದ್ದೇ ಸ್ವಾಮಿಜಿ ಜಾಗವನ್ನು ಬಿಟ್ಟುಕೊಟ್ಟಿದ್ರಾ.? ಅಥವಾ ಹಣವನ್ನು ಪಡೆದುಕೊಂಡಿದ್ರಾ ಅನ್ನೋ ಅನುಮಾನವನ್ನೂ ಕೂಡ ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ. ಪೊಲೀಸರು 7 ದಿನಗಳ ಕಾಲ ಲೀಕ್ ಕಿಂಗ್‍ಪಿನ್ ಶಿವಕುಮಾರಸ್ವಾಮಿಯನ್ನು ಕಸ್ಟಡಿಗೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *