ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ

Public TV
1 Min Read

ಹಾಸನ: ಮುಖ್ಯಮಮತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೊಡ್ಡಣ್ಣ ಎಂದು ಕರೆಯುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣಗೆ ಗದರಿದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಸಿಎಂ ಕುಮಾರಸ್ವಾಮಿ ಗರಂ ಆಗಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ಕುಮಾರಸ್ವಾಮಿ ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಕುರಿತು ಸಭೆ ಮಾಡುತ್ತಿದ್ದರು. ಈ ವೇಳೆ ಸಚಿವ ರೇವಣ್ಣ ತಮ್ಮ ಜಿಲ್ಲೆಯಾದ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಮಾಡುತ್ತಿದ್ದರು. ಇದರಿಂದ ಸಿಎಂ ಕುಮಾರಸ್ವಾಗೆ ಇರಿಸು ಮುರುಸಾಗಿದೆ. ಹೀಗಾಗಿ ಕೋಪಗೊಂಡ ಸಿಎಂ ಕುಮಾರಸ್ವಾಮಿ ಅವರು ರೇವಣ್ಣ ವಿರುದ್ಧವೇ ಗರಂ ಆಗಿದ್ದರು.

ರೇವಣ್ಣ ಕೇಳಿದ ಪ್ರಶ್ನೆಗೆ, ಇಲ್ಲಿ ನಡೆಯುತ್ತಿರುವುದು ರಾಜ್ಯ ಅಭಿವೃದ್ಧಿಗೆ ಸಂಬಂಧ ಪಟ್ಟ ಸಭೆಯಾಗಿದೆ. ಇಲ್ಲಿ ನಿಮ್ಮ ಬರೀ ಹಾಸನದ ಬಗ್ಗೆಯಷ್ಟೆ ಪ್ರಶ್ನೆ ಕೇಳಿದರೆ ಹೇಗಾಗುತ್ತದೆ ಎಂದು ಕೋಪಗೊಂಡು ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ ಅಂತ ಮೂಲಗಳಿಂದ ತಿಳಿದು ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *