ವಿದ್ಯಾರ್ಥಿಗಳಿಗೆ ಥಳಿಸಿದ್ದಕ್ಕೆ ಶಿಕ್ಷಕ ಅಮಾನತು

Public TV
1 Min Read

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಮನಬಂದಂತೆ ಥಳಿಸಿದ ಚಿತ್ತಾಪುರದ ಮೊರಾರ್ಜಿ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಮಂಜುನಾಥ್ ಅಮಾನತುಗೊಂಡ ಶಿಕ್ಷಕ. ಶಾಲೆಯಲ್ಲಿ ಮೂವರು ವಿದ್ಯಾರ್ಥಿಗಳು ಕುಡಿದ ಎಂಜಲು ನೀರನ್ನು ವಾಪಸ್ ಫಿಲ್ಟರ್‍ಗೆ ಹಾಕಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಮಂಜುನಾಥ್ ಮಕ್ಕಳನ್ನು ಬಾಸುಂಡೆ ಬರುವಂತೆ ಬಾರಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿಕ್ಷಕರು ಈರೀತಿ ಮಕ್ಕಳಿಗೆ ಮನಬಂದತೆ ಹೊಡೆಯುವುದು ಸರಿಯಲ್ಲ ಎಂದು ಮಂಜುನಾಥ್ ವಿರುದ್ಧ ಗಾಯಗೊಂಡ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೇಜವಾಬ್ದಾರಿ ವರ್ತನೆ ಹಿನ್ನೆಲೆಯಲ್ಲಿ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *