ಮಕ್ಕಳನ್ನೇ ಕೊಂದ ತಾಯಿ ಪ್ರಕರಣಕ್ಕೆ ಟ್ವಿಸ್ಟ್

Public TV
2 Min Read

ಹುಬ್ಬಳ್ಳಿ/ಧಾರವಾಡ: ಕೌಟುಂಬಿಕ ಕಲಹಕ್ಕೆ ಬೇಸತ್ತು ಹೆತ್ತ ಮಕ್ಕಳನ್ನೆ ತಾಯಿಯೊಬ್ಬಳು ವೇಲ್ ನಿಂದ ಬಿಗಿದು ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಿಯಕರನ ಜೊತೆ ಸೇರಿ ಈ ಕೃತ್ಯವೆಸಗಿದ್ದಾಳೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಹುಬ್ಬಳ್ಳಿಯ ಆಯೋಧ್ಯನಗರದಲ್ಲಿ ಈ ಘಟನೆ ನಡೆದಿತ್ತು. ಪ್ರೇಮಾ ಪರುಶುರಾಮ ಹುಲಕೋಟಿ ಎಂಬವಳು ರೋಹಿತ್ (6) ಮತ್ತು ರೋಹಿಣಿ (4) ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಳು. ಬಳಿಕ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಅನೈತಿಕ ಸಂಬಂಧಕ್ಕೆ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆರೋಪಿ ತಾಯಿ ಪ್ರೇಮಾ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಗಂಡ ಕೆಲಸಕ್ಕೆ ಹೋದಾಗ ಪರ ಪುರುಷ ಮನೆಗೆ ಬಂದು ಹೋಗುತ್ತಿದ್ದನು. ಆಗ ಅವರಿಬ್ಬರ ಅನೈತಿಕ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಿದ್ದರು. ಆದ್ದರಿಂದ ಪ್ರಿಯಕರನ ಜೊತೆ ಸೇರಿ ಮಕ್ಕಳನ್ನೇ ಕೊಲೆ ಮಾಡಿದ್ದಾಳೆ ಎಂದು ನೆರೆಹೊರೆಯವರು ಹೇಳಿದ್ದಾರೆ. ಅಷ್ಟೇ ಅಲ್ಲದೇ ಒಂದು ಮಗುವಿನ ಮೈ ಮೇಲೆ ಬೂಟಿನ ಗುರುತು ಪತ್ತೆಯಾಗಿದ್ದು, ಬಾಯಲ್ಲಿ ರಕ್ತ ಬಂದಿದೆ. ಆದ್ದರಿಂದ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಏನಿದು ಪ್ರಕರಣ?
ಆರೋಪಿ ಪ್ರೇಮಾ ಮತ್ತು ಪರುಶುರಾಮ ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಗೆ ರೋಹಿತ್ ಮತ್ತು ರೋಹಿಣಿ ಇಬ್ಬರು ಮಕ್ಕಳಿದ್ದು, ಸಂಸಾರಿಕ ಜೀವನ ಚೆನ್ನಾಗಿ ನಡೆದುಕೊಂಡು ಹೋಗುತ್ತಿತ್ತು. ಪತಿ ಪರುಶರಾಮ್ ಗಾರೆ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕುಡಿತದ ಚಟಕ್ಕೆ ದಾಸನಾಗಿದ್ದನು. ಹೀಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಮಕ್ಕಳನ್ನು ಸಾಕಲು, ಮನೆಯ ನಿರ್ವಹಣೆ ಮಾಡಲು ಕೂಡ ಹಣ ಕೊಡುತ್ತಿರಲಿಲ್ಲ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಆರೋಪಿ ತಾಯಿ ಮತ್ತು ಪತಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆಗ ನಮ್ಮಿಬ್ಬರ ಸಂಸಾರದಲ್ಲಿ ಮಕ್ಕಳೇ ನಮಗೆ ಭಾರವಾಗಿದ್ದು, ಮಕ್ಕಳನ್ನು ಸಾಕಲು ಪತಿ ಹಣ ಕೊಡುತ್ತಿರಲಿಲ್ಲ. ಪತಿ ಕುಡಿತ ಚಟಕ್ಕೆ ದಾಸನಾಗಿದ್ದನು. ಆದ್ದರಿಂದ ಇಂದು ಬೆಳಗ್ಗೆ ಕತ್ತು ಹಿಸುಕಿ ಕೊಂದಿರುವುದಾಗಿ ತಾಯಿ ವಿಚಾರಣೆ ವೇಳೆ ತಪ್ಪು ಒಪ್ಪಿಕೊಂಡಿದ್ದಳು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *