ಬಿಯರ್ ಕಳ್ಳತನದ ಆರೋಪ-ಮನನೊಂದ ಯುವಕ ಆತ್ಮಹತ್ಯೆಗೆ ಶರಣು

Public TV
1 Min Read

ಹಾಸನ: ಬಿಯರ್ ಕಳ್ಳತನದ ಆರೋಪ ಎದುರಿಸುತ್ತಿದ್ದ ಯುವಕನೊಬ್ಬ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೈಗಾರಿಕಾ ವಲಯದಲ್ಲಿ ನಡೆದಿದೆ.

21 ವರ್ಷದ ಸುನೀಲ್ ಆತ್ಮಹತ್ಯೆಗೆ ಶರಣಾದ ಯುವಕ. ಸುನೀಲ್ ಮೂಲತಃ ಕಂಚಮಾರನಹಳ್ಳಿ ಗ್ರಾಮದ ನಿವಾಸಿಯಾಗಿದ್ದನು. ಹಾಸನದ ಕೈಗಾರಿಕಾ ವಲಯದಲ್ಲಿರುವ ವುಡ್‍ಪೆಕೆರ್ ಡಿಸ್ಟ್ರಿಲರೀಸ್ ಅಂಡ್ ಬ್ರೇವರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಬಿಯರ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಶುಕ್ರವಾರ ಫ್ಯಾಕ್ಟರಿಯಲ್ಲಿ 11 ಬಿಯರ್ ನಾಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಸುನೀಲ್ ಸೇರಿದಂತೆ ಅಭಿಲಾಷ್ ಹಾಗೂ ಸಂತೋಷ್ ಎಂಬವರ ವಿರುದ್ಧ ದೂರು ದಾಖಲಾಗಿತ್ತು.

ಕಳ್ಳತನ ಆರೋಪ ದಾಖಲಾಗಿದ್ದಕ್ಕೆ ಮನನೊಂದ ಸುನೀಲ್ ಮಂಗಳವಾರ ಮನೆಯಲ್ಲೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಅರಿತ ಪೋಷಕರು ಕೂಡಲೇ ಮಗನನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುನಿಲ್ ಮೃತಪಟ್ಟಿದ್ದಾನೆ.

ಸುನೀಲ್ ಮೃತಪಡುತ್ತಿದ್ದಂತೆ ಸಂಬಂಧಿಕರು ಬಿಯರ್ ಫ್ಯಾಕ್ಟರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತದೇಹವನ್ನು ಫ್ಯಾಕ್ಟರಿ ಬಳಿ ಇಟ್ಟು ಪ್ರತಿಭಟನೆಯನ್ನು ಸಹ ನಡೆಸಿದ್ದಾರೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *