ಸಿಲಿಂಡರ್ ಸ್ಫೋಟದಿಂದ ಅವಘಡ – ಬೀದಿಗೆ ಬಂದ ಇಪ್ಪತ್ತು ಕುಟುಂಬಗಳು

Public TV
1 Min Read

ಚಿತ್ರದುರ್ಗ: ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮವಾಗಿ 20 ಗುಡಿಸಲುಗಳು ಬೆಂಕಿಗಾಹುತಿ ಆಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡವಾಣೆಯಲ್ಲಿ ನಡೆದಿದೆ.

ಕಡು ಬಡವರೇ ಹೆಚ್ಚು ವಾಸವಾಗಿರುವ ಈ ಬಡಾವಣೆಯಲ್ಲಿ ಎಲ್ಲರೂ ಬಹುತೇಕ ಮಂದಿ ಕೂಲಿಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಾರೆ. ಇಂದು ಅವರೆಲ್ಲ ಕೆಲಸಕ್ಕೆ ತೆರಳಿರುವ ವೇಳೆ ಅವಘಡ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳು, ಮನೆಯಲ್ಲಿ ಇಟ್ಟಿದ್ದ ಬಂಗಾರ, ಬಟ್ಟೆ ಹಾಗು ದಿನ ಬಳಕೆ ಪದಾರ್ಥಗಳು ಸುಟ್ಟು ಕರಕಲಾಗಿವೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಸರಿಯಾದ ಸಮಯಕ್ಕೆ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಸುತ್ತಮುತ್ತಲಿನ ಬೇರೆ ಪ್ರದೇಶಗಳಿಗೆ ಹರಡಿ ಹೆಚ್ಚಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಸುಮಾರು ಇಪ್ಪತ್ತು ಕುಟುಂಬಗಳು ಸೂರಿಲ್ಲದೇ ಬೀದಿಗೆ ಬೀಳುವಂತಾಗಿದ್ದೂ, ಆಶ್ರಯದ ನೆರವು ಕೋರಿದ್ದಾರೆ. ಈ ಘಟನೆ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *