ಜನರೇಟರ್ ವಾಹನಕ್ಕೆ ಕಂಟೈನರ್ ಡಿಕ್ಕಿ- ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

By
1 Min Read

ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಜನರೇಟರ್ ವಾಹನಕ್ಕೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಮೂಹಿಗರ್ ಪಟ್ರ(39) ಹಾಗೂ ವಿವೇಕ್ ಮೃತಪಟ್ಟ ವ್ಯಕ್ತಿಗಳು. ಉಮರ್ ಹಾಗೂ ಸೂರಜ್ ಎಂಬವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿ ಹಾಗೂ ಗಾಯಾಳುಗಳು ಅಸ್ಸಾಂ ಮೂಲದವರು. ಅತ್ತಿಬೆಲೆ ಆನೇಕಲ್ ಮುಖ್ಯರಸ್ತೆಯ ಬದಿಯಲ್ಲಿ ಗೇಲ್ ಗ್ಯಾಸ್ ಲೈನ್ ಕಂಪನಿ ಭೂಮಿ ಅಡಿಯಲ್ಲಿ ನಾಲ್ವರು ಪೈಪ್ ಲೈನ್ ನಿರ್ಮಿಸುತ್ತಿದ್ದರು.

ಈ ವೇಳೆ ನಿಲ್ಲಿಸಿಕೊಂಡಿದ್ದ ಜನರೇಟರ್ ವಾಹನಕ್ಕೆ ಪಾನಮತ್ತನಾಗಿದ್ದ ಕಂಟೈನರ್ ಚಾಲಕ ಅತ್ತಿಬೆಲೆ ಕಡೆಯಿಂದ ಬರುತ್ತಿದ್ದಾಗ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನುಳಿದ ಮೂವರು ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿವೇಕ್ ಎಂಬವರು ಮೃತಪಟ್ಟಿದ್ದಾರೆ.

ಕ್ಯಾಂಟರ್ ಚಾಲಕನನ್ನು ಅತ್ತಿಬೆಲೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *