ಮಾಂಸಾಹಾರ ಸೇವಿಸಬೇಡಿ ಎಂದಿದ್ದಕ್ಕೆ ನಿವೃತ್ತ ಪೊಲೀಸ್ ಆತ್ಮಹತ್ಯೆ!

Public TV
1 Min Read

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಮಾನಸಿಕವಾಗಿ ನೊಂದವರೇ ಹೆಚ್ಚು ಇರುತ್ತಾರೆ. ಆದರೆ ಮಾಂಸಾಹಾರ ಸೇವನೆ ಮಾಡಬೇಡಿ ಎಂದು ಸಲಹೆ ನೀಡಿದ್ದಕ್ಕೆ ನಿವೃತ್ತ ಪೊಲೀಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ನಿವಾಸಿ ಬೆಳ್ಳಿಯಪ್ಪ (64) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳ್ಳಿಯಪ್ಪ ಕಳೆದ ಹಲವು ವರ್ಷಗಳಿಂದ ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕೆ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇತ್ತೀಚೆಗೆ ಡಾಕ್ಟರ್ ನೀವು ಮಾಂಸಾಹಾರ ಸೇವನೆ ಮಾಡಬಾರದು ಅಂತ ಸಲಹೆ ನೀಡಿದ್ದಾರೆ.

ವೈದ್ಯರು ಮಾಂಸಾಹಾರವನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದ ಬಳಿಕ ಬೆಳ್ಳಿಯಪ್ಪ ಮಾನಸಿಕ ಖಿನ್ನತೆಗೆ ಜಾರಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *