ಮತ್ತೆ ಹೆಚ್ಚಾಯ್ತು ದರೋಡೆಕೋರರ ಹಾವಳಿ – ಯುವಕನ ಮೇಲೆ ಡ್ಯಾಗರ್‌ನಿಂದ ದಾಳಿ

Public TV
1 Min Read

ಬೆಂಗಳೂರು: ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡುತ್ತಿದ್ದ ದರೋಡೆಕೋರರ ಗುಂಪು ಯುವಕನ ಬಳಿ ಮೊಬೈಲ್, ಹಣ ಕಿತ್ತುಕೊಳ್ಳಲು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಗರದ ಹೃದಯ ಭಾಗ ಎಂದು ಕರೆಯುವ ಬಳೇಪೇಟೆ ಬಳಿ ನಡೆದಿದೆ.

ಪ್ರಮೋದ್ (17) ದರೋಡೆ ಗ್ಯಾಂಗಿನಿಂದ ಹಲ್ಲೆಗೊಳಗಾದ ಯುವಕ. ಜನವರಿ 13 ರಂದು ತಡರಾತ್ರಿ ಸುಮಾರು 9.30ಕ್ಕೆ ಎಂಎಸ್‍ಆರ್ ಲೇನ್ ನಲ್ಲಿ ನಡೆದುಕೊಂಡು ಬರುವಾಗ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಮೊದಲೇ ಡ್ರಾಗರ್ ಹಿಡಿದು ಹೊಂಚು ಹಾಕಿ ಕುಳಿತ್ತಿದ್ದ 3 ದುಷ್ಕರ್ಮಿಗಳು ಪ್ರಮೋದ್‍ನನ್ನು ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ಯುವಕನ ಸಹಾಯಕ್ಕೆ ಧಾವಿಸಿ ರಕ್ಷಣೆ ಮಾಡಿದ್ದಾರೆ.

ಸ್ಥಳೀಯರು ಯುವಕನ ನೆರವಿಗೆ ಧಾವಿಸಿದ್ದನ್ನು ಕಂಡ ದರೋಡೆಕೋರರ ಗುಂಪು ಅವರನ್ನು ಕ್ಷಣ ಕಾಲ ಗುರಾಯಿಸಿದ್ದು, ಬಳಿಕ ಕೃತ್ಯವನ್ನು ಮೊಬೈಲ್‍ನಲ್ಲಿ ಫೋಟೋ ತೆಗೆದುಕೊಳ್ಳಲು ಮುಂದಾಗುತ್ತಿದ್ದಂತೆ ಅವರ ಮೇಲೂ ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ. ಈ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಗರದಲ್ಲಿ ಒಂಟಿಯಾಗಿ ಓಡಾಡುವವರನ್ನು ಟಾರ್ಗೆಟ್ ಮಾಡುವ ಈ ಗ್ಯಾಂಗ್ ಮಾರಕಾಸ್ತ್ರ ಹಿಡಿದು ಹೊಂಚು ಹಾಕಿ ಕುಳಿತ್ತಿರುತ್ತದೆ. ರಸ್ತೆಯಲ್ಲಿ ನಡೆದು ಬರುವ ಯುವಕ, ಯುವತಿಯರಿಂದ ಮೊಬೈಲ್, ಹಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಾರೆ. ಈ ವೇಳೆ ಪ್ರತಿರೋಧ ತೋರಿದವರ ಮೇಲೆ ಹಲ್ಲೆ ನಡೆಸುತ್ತಾರೆ. ಅಂದು ರಾತ್ರಿ ಕೂಡ ಯುವಕ ಮೊಬೈಲ್ ನೀಡದಿದ್ದರಿಂದ ಹಲ್ಲೆ ನಡೆಸಿದ್ದಾರೆ. ಆದರೆ ಅದೃಷ್ಟವಶಾತ್ ಸ್ಥಳೀಯರು ಯುವಕನ ನೆರವಿಗೆ ಬಂದ ಪರಿಣಾಮ ಅಪಾಯದಿಂದ ಪಾರಾಗಿದ್ದಾನೆ.

ಈ ಘಟನೆ ಕುರಿತು ಕೆ.ಆರ್ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿಟಿವಿ ದೃಶ್ಯವಾಳಿಯನ್ನು ಆಧಾರಿಸಿ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *