ಸೀತಾರಾಮ ಕಲ್ಯಾಣ ಚಿತ್ರದ ಪ್ರೀಮಿಯರ್ ಶೋಗೆ ಹರಿದುಬಂತು ರಾಜಕೀಯ ದಂಡು

Public TV
1 Min Read

ಬೆಂಗಳೂರು: ಜಾಗ್ವಾರ್ ಹುಡುಗನ ಹೊಸ ಸಿನಿಮಾ ರಿಲೀಸ್ ಆಗಿದೆ. ಸಿಎಂ ಕುಮಾರಸ್ವಾಮಿ ಪುತ್ರನ ಸೀತರಾಮ ಕಲ್ಯಾಣ ಸಿನಿಮಾ ನೋಡಿ ಸಂಭ್ರಮಿಸೋಕೆ ಸ್ಯಾಂಡಲ್‍ವುಡ್ ಸಿನಿರಸಿಕರು ಕಾಯುತ್ತಿದ್ದಾರೆ. ಈ ಚಿತ್ರದ ಪ್ರೀಮಿಯರ್ ಶೋಗೆ ರಾಜಕೀಯ ದಂಡೇ ಹರಿದುಬಂದಿತ್ತು.

ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸ್ಯಾಂಡಲ್‍ವುಡ್ ಯುವರಾಜ್, ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ‘ಸೀತಾರಾಮ ಕಲ್ಯಾಣ’ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದೆ. ಶ್ರೀಮತಿ ಅನಿತಾ ಕುಮಾರಸ್ವಾಮಿ ನಿರ್ಮಾಣದ ಸಿನಿಮಾ ಸುಮಾರು 300ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಎ. ಹರ್ಷ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾದಲ್ಲಿ ನಿಖಿಲ್‍ಗೆ ನಾಯಕಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಮಿಂಚಿದ್ದಾರೆ. ಚಿತ್ರದ ಪ್ರೀಮಿಯರ್ ಶೋ ನಡೆದಿದ್ದು ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಬಿಜೆಪಿ ನಾಯಕ ಈಶ್ವರಪ್ಪ, ಬಿ.ಸಿ ಪಾಟೀಲ್ ಸೇರಿದಂತೆ ರಾಜಕೀಯ ನಾಯಕರ ದಂಡೆ ಆಗಮಿಸಿತ್ತು. ಈ ವೇಳೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ನಿಖಿಲ್ ಅಭಿನಯಕ್ಕೆ 100 ಕ್ಕೆ 100 ಅಂಕ ಕೊಡುತ್ತೇನೆ. ಎಲ್ಲ ರಾಜಕೀಯ ನಾಯಕರು ಪಕ್ಷಾತೀತವಾಗಿ ಸಿನಿಮಾ ನೋಡಿ ಮೆಚ್ಚಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಮಾತನಾಡಿ, ಸೀತಾರಾಮ ಕಲ್ಯಾಣದಲ್ಲಿ ಕುಟುಂಬ ಸಂಬಂಧ ತೋರಿಸಲಾಗಿದೆ. ರೈತರಿಗೆ ಒಳ್ಳೆಯ ಸಂದೇಶವಿದೆ ಎಂದು ಹೇಳಿದ್ದಾರೆ. ಗೃಹ ಸಚಿವ ಎಂ.ಬಿ ಪಾಟೀಲ್ ಚಿತ್ರ ವೀಕ್ಷಿಸಿ ನಿಖಿಲ್ ಭವಿಷ್ಯದ ಸೂಪರ್ ಸ್ಟಾರ್ ಆಗೋದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಬಿ.ಸಿ ಪಾಟೀಲ್, ಬಹಳ ವರ್ಷಗಳ ನಂತರ ಅದ್ಭುತ ಸಿನಿಮಾ ನೋಡಿದಂಗಾಯಿತು ಎಂದಿದ್ದಾರೆ.

ಜಾಗ್ವಾರ್ ಬಳಿಕ ನಿಖಿಲ್ ಎರಡನೇ ಬಾರಿ ಬೆಳ್ಳಿತೆರೆಯಲ್ಲಿ ಅಖಾಡಕ್ಕಿಳಿದಿದ್ದಾರೆ. ಟೀಸರ್, ಸಾಂಗ್ಸ್ ಮೂಲಕವೇ ಸಖತ್ ಸೌಂಡ್ ಮಾಡಿದ್ದ ಸೀತಾರಾಮ ಕಲ್ಯಾಣ ಕುಟುಂಬ ಕಥಾನಕವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *