ಸಾಣೇಹಳ್ಳಿ ತರಳಬಾಳು ಪಂಡಿತಾರಾಧ್ಯ ಶ್ರೀಗಳ ಕಾರು ಅಪಘಾತ..!

Public TV
1 Min Read

ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಂದು ಜಿಲ್ಲೆಯ ಸಾಸಲು ಗ್ರಾಮದ ಬಳಿ ಅಪಘಾತ ನಡೆದಿದೆ.

ಹೊಳೆಲ್ಕರೆ ತಾಲೂಕಿನ ಸಾಸಲು ಗ್ರಾಮದ ಬಳಿ ಪಂಡಿತಾರಾಧ್ಯ ಶ್ರೀಗಳ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದಲ್ಲಿ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀಗಳು ಪ್ರಯಾಣಿಸುತ್ತಿದ್ದ ಕಾರ್ ಸಂಪೂರ್ಣ ಜಖಂಗೊಂಡಿದ್ದು, ಡಿಕ್ಕಿ ಹೊಡೆದ ಲಾರಿ ಪಲ್ಟಿಯಾಗಿದೆ.

ಇಂದು ಬೆಳಗ್ಗೆ ಸ್ವಾಮೀಜಿಗಳು ಸಿರಿಗೆರೆಯಿಂದ ಸಾಸಲು ಮಾರ್ಗವಾಗಿ ಭದ್ರಾವತಿಗೆ ತೆರಳುತ್ತಿದ್ದರು. ಈ ವೇಳೆ ಸಾಸಲು ರೈಲ್ವೇ ಮೇಲ್ಸೇತುವೆ ಬಳಿ ಬರುತ್ತಿದ್ದಂತೆ ಎದುರಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ, ಸದ್ಯ ಘಟನೆ ಸಂಬಂಧ ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *