ಪಾದಚಾರಿ ಮೇಲೆ ಹರಿದ ಕಾಂಕ್ರಿಟ್ ಲಾರಿ

Public TV
1 Min Read

ಮಡಿಕೇರಿ: ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿಯೊಂದು ಪಾದಚಾರಿಯ ಮೇಲೆ ಹರಿದ ಪರಿಣಾಮ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಪುರ ಗ್ರಾಮದಲ್ಲಿ ನಡರದಿದೆ.

ರಾಮಣ್ಣ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ರಾಮಣ್ಣ ಮೂಲತಃ ಬಳ್ಳಾರಿಯವರಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕಿರುತೆರೆ ನಟಿ ಶ್ವೇತಾ ಚಂಗಪ್ಪರವರ ಸಂಬಂಧಿಯಾಗಿರುವ ಕಾವೇರಪ್ಪ ಕಾಶಿರವರ ಗರ್ವಾಲೆಯಲ್ಲಿರುವ ತೋಟಕ್ಕೆ ರಾಮಣ್ಣ ಎಂಬಾತ ಕಳೆದ ಒಂದು ತಿಂಗಳ ಹಿಂದೆ ತಾನು ಬಳ್ಳಾರಿಯವನೆಂದು ಹೇಳಿಕೊಂಡು ಕೂಲಿ ಕೆಲಸಕ್ಕೆ ಸೇರಿಕೊಂಡಿದ್ದರು.

ಇಂದು ಸೋಮವಾರಪೇಟೆ ತಾಲೂಕಿನ ಮಾದಾಪುರ ಸಂತೆಗೆಂದು ಬಂದವನು ಮೊಬೈಲ್‍ನ್ನು ತೋಟದ ಮಾಲೀಕರ ಸಂಬಂಧಿಯಿಂದ ಖರೀದಿಸಿಕೊಂಡಿದ್ದ ಎನ್ನಲಾಗಿದೆ. ಹೊಸ ಮೊಬೈಲ್ ಸಿಕ್ಕಿದ ಸಂಭ್ರಮದಲ್ಲಿ ಈತ ಮಾದಾಪುರ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ಮೊಬೈಲಿನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಈ ವೇಳೆ ಬಯಲುಕೊಪ್ಪದಿಂದ ಮಾದಾಪುರ ಸಮೀಪದ ಜಂಬೂರುವಿನಲ್ಲಿ ನಿರಾಶ್ರಿತರಿಗೆ ನಿರ್ಮಾಣವಾಗುತ್ತಿರುವ ಮನೆಯ ಕೆಲಸಕ್ಕೆಂದು ಕಾಂಕ್ರೀಟ್ ಸಾಗಿಸುತ್ತಿದ್ದ ಲಾರಿಯ ಹಿಂಬದಿ ಚಕ್ರ ರಾಮಣ್ಣನ ಮೇಲೆ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡು ಚಿಂತಾಜನಕನಾದ ರಾಮಣ್ಣನನ್ನು ಮಡಿಕೇರಿ ಆಸ್ಪತ್ರೆಗೆ ಸೇರಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *