ಆಡಿಯೋ ಟೇಪ್ ಕೇಸ್ – ರಾಷ್ಟ್ರಪತಿಗಳಿಗೆ ದೂರು ನೀಡಲು ಕಾಂಗ್ರೆಸ್ ತೀರ್ಮಾನ

Public TV
1 Min Read

ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಮಾಡಿದೆ ಎನ್ನಲಾದ ಆಡಿಯೋವೊಂದನ್ನು ಎಚ್‍ಡಿ ಕುಮಾರಸ್ವಾಮಿ ಅವರು ರಾಜ್ಯ ಬಜೆಟ್ ದಿನದಂದು ಬಿಡುಗಡೆಗೊಳಿಸಿದ್ದು, ಇದೀಗ ಬಿಜೆಪಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

ಹೌದು. ಆಡಿಯೋ ಪ್ರಕರಣ ಸಂಬಂಧ ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮತ್ತಷ್ಟು ಡ್ಯಾಮೇಜ್ ಮಾಡಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಬಿಎಸ್‍ವೈ ಮತ್ತು ಬಿಜೆಪಿ ವಿರುದ್ಧ ರಾಷ್ಟ್ರಪತಿಗಳಿಗೆ ಸಾಕ್ಷ್ಯ ಸಮೇತ ದೂರು ನೀಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಶಾಸಕರ ಖರೀದಿ ಹಾಗೂ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಹೆಸರು ಬಳಕೆ ಮಾಡಿದ ಹಿನ್ನೆಲೆಯಲ್ಲಿ ಬಿಎಸ್‍ವೈ ಆಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಲು ತಯಾರಿ ನಡೆಸಲಾಗಿದೆ. ಅಲ್ಲದೇ ಪ್ರಕರಣ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಧ್ಯಪ್ರವೇಶ ಮಾಡುವಂತೆ ಕಾಂಗ್ರೆಸ್ ನಿಯೋಗ ಮನವಿ ಮಾಡಿಕೊಳ್ಳಲಿದೆ ಎನ್ನಲಾಗಿದೆ.

ರಾಷ್ಟ್ರಪತಿಗಳಿಗೆ ಆಡಿಯೋ ಕಂಪ್ಲೆಂಟ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚರ್ಚೆಯಾಗುತ್ತಿದ್ದು, ನಾಳೆ ಸಂಸತ್ ಅಧಿವೇಶನ ಮುಗಿದ ಕೂಡಲೇ ರಾಷ್ಟ್ರಪತಿಗಳಿಗೆ ದೂರು ನೀಡುವ ಸಾಧ್ಯತೆಗಳಿವೆ. ಸೋಮವಾರ ಲೋಕಸಭೆಯಲ್ಲಿಯೂ ಕೂಡ ದೋಸ್ತಿಗಳು ಬಿಎಸ್‍ವೈ ಮತ್ತು ಬಿಜೆಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *