ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿರುದ್ಧ ವರದಕ್ಷಿಣೆ ಕೇಸ್ ದಾಖಲು

Public TV
1 Min Read

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ. ಕಾರಂಗಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ.

ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ನೀಡಿದ ದೂರಿನನ್ವಯ ತುಮಕೂರು ಮಹಿಳಾ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತುಮಕೂರು ಮೂಲದ ಆಸ್ಮಾ ತಾಜ್ ಹಾಗೂ ಬಳ್ಳಾರಿ ಮೂಲದ ಜಾವೀದ್ ಕಾರಂಗಿಗೆ 2008ರಲ್ಲಿ ಆಗಸ್ಟ್ 26ರಂದು ಮದುವೆಯಾಗಿತ್ತು.

ಮದುವೆ ಆದಾಗಿನಿಂದಲೂ ಕೂಡಾ ಜಾವೀದ್ ತನ್ನ ಪತ್ನಿ ಅಸ್ಮಾ ತಾಜ್‍ಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೇ ಪತ್ನಿಯನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಜಾವೀದ್ ಹಾಗೂ ಅವರ ತಂದೆ ಖಾಜಾ ಮೋಹಿದ್ದಿನ್, ತಾಯಿ ಫಾತಿಮಾ ಸೇರಿದಂತೆ ಒಟ್ಟು ಐದು ಜನರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *