ಆ್ಯಂಡಿ-ಕವಿತಾ ಡಿಶುಂ ಡಿಶುಂ ಸುಖಾಂತ್ಯ

Public TV
1 Min Read

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಲ್ಲಿ ವಿಚಾರಣೆ ಮಾಡಿದ ನಂತರ ಬಿಗ್‍ಬಾಸ್ ಸೀಸನ್ 6ರ ಸ್ಪರ್ಧಿ ಕವಿತಾ ಗೌಡ ಮತ್ತು ಆ್ಯಂಡಿ ನಡುವಿನ ಜಗಳವೂ ಕೊನೆಗೊಂಡಿದೆ.

ಕವಿತಾ ಸ್ಪರ್ಧಿ ಆ್ಯಂಡಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ನೋಟಿಸ್ ನೀಡಿದ್ದರು. ಇಬ್ಬರು ಶನಿವಾರ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- ವಿಚಾರಣೆಗೆ ಹಾಜರಾದ ಆ್ಯಂಡಿ

ಈ ಬಗ್ಗೆ ಪ್ರತಿಕ್ರಿಯಿಸಿದ ಕವಿತಾ, ಆಂಡ್ರ್ಯೂ ನನಗೆ ಕ್ಷಮೆ ಕೇಳಿದ್ದಾರೆ. ಕಿರುಕುಳ ಕೊಟ್ಟಿರುವ ಬಗ್ಗೆ ಅವರು ಒಪ್ಪಿಕೊಂಡಿದ್ದು, ಮತ್ತೆ ಈ ರೀತಿ ಮಾಡಲ್ಲ ಎಂದಿದ್ದಾರೆ. ಆದ್ದರಿಂದ ಈ ಪ್ರಕರಣವನ್ನು ಇಲ್ಲಿಗೆ ಬಿಡುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಚಾರಣೆಯಲ್ಲಿ ಆಂಡ್ರ್ಯೂ, ಒಬ್ಬರಿಗೆ ಬೇಜಾರಾಗಿದೆ ಅಂದರೆ ಖಂಡಿತ ನಾನು ಕ್ಷಮೆ ಕೇಳುವೆ. ಈಗಲೂ ಕವಿತಾ ಮೇಲೆ ನನಗೆ ಗೌರವ ಇದೆ ಅಂತ ಮಹಿಳಾ ಆಯೋಗದ ಅಧ್ಯಕ್ಷರ ಮುಂದೆ ಒಪ್ಪಿಕೊಂಡಿದ್ದಾರೆ. ಗೇಮ್ ನಲ್ಲಿ ಆಗಿರುವ ಕಿರಿಕಿರಿಗೆ ನಾನು ಕವಿತಾಗೆ ಕ್ಷಮೆ ಕೇಳಿದ್ದೇನೆ ಎಂದು ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *