ಸೈನಿಕರಿಗೆ ಹ್ಯಾಟ್ಸ್ ಆಫ್, ಅವರು ಇಷ್ಟು ಮಾಡಿದ್ರೆ ನಮ್ಮವರು ಅಷ್ಟು ಮಾಡಿದ್ದಾರೆ: ದರ್ಶನ್

Public TV
1 Min Read

ಬೆಂಗಳೂರು: ಪಾಕ್ ಉಗ್ರರ ವಿರುದ್ಧ ಭಾರತ ನಡೆಸಿರುವ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದರ್ಶನ್, “ಸರ್ಜಿಕಲ್ ಸ್ಟ್ರೈಕ್ ಒಂದು ಅಮೆಜಿಂಗ್ ಕೆಲಸ. ನಾನು ಸೈನಿಕರಿಗೆ ಹ್ಯಾಟ್ಸ್ ಆಫ್ ಹೇಳುತ್ತೇನೆ. ಅವರು ಇಷ್ಟು ಮಾಡಿದರು ನಮ್ಮವರು ಅಷ್ಟು ಮಾಡಿದ್ದಾರೆ. ಇನ್ನುಂದೆ ಉಗ್ರಗಾಮಿಗಳು ಮುಂದೆ ಏನು ಮಾಡಬೇಕಾದರೂ ಒಂದು ಸಾರಿ ಯೋಚನೆ ಮಾಡಬೇಕು. ಟಿಟ್ ಫಾರ್ ಟ್ಯಾಟ್ (ದಾಳಿಗೆ ಪ್ರತಿದಾಳಿ), ಎಲ್ಲೇ ಆಗಲಿ ಯಾವುದೇ ಫೀಲ್ಡ್ ಇರಲಿ ಅವರು ಇಷ್ಟು ಮಾಡಿದರೆ, ನಾವು ಅಷ್ಟು ಮಾಡೋದು ಸರಿ” ಎಂದು ಅನಿಸಿಕೆ ಹಂಚಿಕೊಂಡಿದ್ದಾರೆ.

ಭಾರತೀಯ ಯೋಧರನ್ನು ಬಲಿಪಡೆದಿದ್ದ ಪಾಕಿಸ್ತಾನದ ವಿರುದ್ಧ ಭಾರತ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ. ಸಿನಿಮಾ ಸ್ಟಾರ್ಸ್ ಸೇರಿದಂತೆ ದೇಶಾದ್ಯಂತ ಭಾರತೀಯ ವಾಯುಸೇನೆಯ ಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೌದು. ಸ್ಯಾಂಡಲ್‍ವುಡ್ ನಟರು ಮಾತ್ರವಲ್ಲದೇ ಬಾಲಿವುಡ್ ನಟರು ಕೂಡ ಸೇನೆಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ ಧ್ರವಾ ಸರ್ಜಾ ಅವರು, “ಭಾರತೀಯರ ಮೈಯಾಗ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ.. ಮಕ್ಳಾ ಬ್ಲಾಸ್ಟ್ ಆಗೋಯ್ತಿರಾ. ಭೋಲೋ ಭಾರತ್ ಮಾತಾ ಕಿ ಜೈ.. ಜೈ ಆಂಜನೇಯ” ಎಂದು ಟ್ವೀಟ್ ಮಾಡಿ ಪಾಕಿಸ್ತಾನದವರಿಗೆ ಭಾರತೀಯರ ಪೊಗರಿನ ಬಗ್ಗೆ ತಿಳಿಸಿಕೊಟ್ಟಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *