ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರರು ದುಬೈನಲ್ಲಿ ಪತ್ತೆ?

Public TV
1 Min Read

ಉಡುಪಿ: ಮಲ್ಪೆಯ ಕಡಲ ಬಂದರಿನಿಂದ ನಾಪತ್ತೆಯಾಗಿದ್ದ 7 ಮೀನುಗಾರರು ದುಬೈನಲ್ಲಿ ಪತ್ತೆಯಾಗಿರುವ ಮಾಹಿತಿ ಲಭಿಸಿದೆ ಎಂದು ಬಿಜೆಪಿ ಸಂಸದೆ, ರಾಷ್ಟ್ರೀಯ ವಕ್ತಾರೆ ಮೀನಾಕ್ಷಿ ಲೇಖಿ ತಿಳಿಸಿದ್ದಾರೆ.

ನಮೋ ಭಾರತ್ ಸಂಘಟನೆಯಿಂದ ಪಾಂಚಜನ್ಯ ಸಮಾವೇಶ ವೇಳೆ ಭಾಷಣ ಮಾಡಿದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದು, ದುಬೈನಲ್ಲಿ ಕೆಲ ಮೀನುಗಾರರ ಪತ್ತೆಯಾಗಿರುವ ಬಗ್ಗೆ ಕೆಲ ಮಾಧ್ಯಮಗಳು ವರದಿ ಮಾಡಿದೆ. ಈ ವರದಿಯಗಳ ಅನ್ವಯ ಪತ್ತೆಯಾದ ಮೀನುಗಾರರು ಮಲ್ಪೆಯ 7 ಮೀನುಗಾರರ ಎಂಬುವುದರ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

ದುಬೈನಲ್ಲಿ ಪತ್ತೆಯಾದವರು ಮಲ್ಪೆ ಮೀನುಗಾರರೆ ಎಂಬುವುದು ಖಚಿತವಾದರೆ ಸರ್ಕಾರ ಅವರನ್ನು ವಾಪಸ್ ಕರೆತರಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಡಿಸೆಂಬರ್ 15 ರಂದು ಮಲ್ಪೆಯಿಂದ ಮಹಾರಾಷ್ಟ್ರದ ರತ್ನಗಿರಿಗೆ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಎನ್ನುವ ಬೋಟ್ ಸಮೇತ ಅದರಲ್ಲಿದ್ದ ರಾಜ್ಯದ 7 ಮೀನುಗಾರರು ನಾಪತ್ತೆಯಾಗಿದ್ದರು. ಈವರೆಗೂ ಮೀನುಗಾರರ ಅಥವಾ ಬೋಟಿನ ಕುರಿತು ಯಾವುದೇ ಮಾಹಿತಿ ದೊರೆತಿಲ್ಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *